ಪರಿಷತ್ ಚುನಾವಣೆಯಲ್ಲಿ ಸೋಲು : ಬೇಸರದಲ್ಲಿ‌ ಕುಮಾರಸ್ವಾಮಿ ಹೇಳಿದ್ದೇನು..?

suddionenews
1 Min Read

ಬೆಂಗಳೂರು: ಇಂದು ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಇದರಲ್ಲಿ ಜೆಡಿಎಸ್ ಸೋಲನ್ನ ಅನುಭವಿಸಿದೆ. ಹಾಸನದಲ್ಲಿ ರೇವಣ್ಣ ಅವರ ಮಗ ಸೂರಜ್ ರೇವಣ್ಣ ಬಿಟ್ಟರೆ ಬೇರೆ ಯಾವ ಅಭ್ಯರ್ಥಿಯೂ ಗೆಲುವು ಕಂಡಿಲ್ಲ. ಈ ಬಗ್ಗೆ ಕುಮಾರಸ್ವಾಮಿ ಬೇಸರದಲ್ಲೆ ಟ್ವೀಟ್ ಮಾಡಿದ್ದಾರೆ.

ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಿದ್ದೇವೆ.

2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ ಎಂದು ಹಿಂದೆಯೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಆ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿದ್ದೇವೆ. ʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ.

ಚುನಾವಣೆ ಎಂದರೆ ಸೋಲು-ಗೆಲುವು. ಗೆಲುವಿಗಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಶಕ್ತಿ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ಈಗ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಹಣಬಲದಿಂದ ಎದುರಾಗುವ ಇಂಥ ಸೋಲುಗಳಿಗೆ ಜೆಡಿಎಸ್‌ ಎಂದೂ ಧೃತಿಗೆಡುವುದಿಲ್ಲ.

ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಈ ಚುನಾವಣೆಯ ಮತದಾರರು. ಜನರೇ ನೇರವಾಗಿ ಹಕ್ಕು ಚಲಾಯಿಸುವ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಶಕ್ತಿ ಏನೆಂಬುದು ತಿಳಿಯಲಿದೆ. ಪಕ್ಷ ಮತ್ತೆ ಪುಟಿದೆದ್ದು ಬರಲಿದೆ. ಜನರಲ್ಲಿ ಜೆಡಿಎಸ್‌ ಬಗೆಗಿನ ವಿಶ್ವಾಸವನ್ನು ಅಳಿಸಲಾಗದು ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *