Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ದುರಂತ ಹಾಗೂ ಖಂಡನೀಯ : ಸಲೀಂ ಅಹ್ಮದ್

---Advertisement---

ಸುದ್ದಿಒನ್, ಹಿರಿಯೂರು, ಏಪ್ರಿಲ್. 15  : ಬಡವರ ಏಳಿಗೆ ಹಾಗೂ ಮಹಿಳೆಯರ ಸಬಲೀಕರಣಕ್ಕಾಗಿ ಅನುಷ್ಠಾನಗೊಳಿಸಿದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವುದು ದುರಂತ  ಹಾಗೂ ಖಂಡನೀಯ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಕಿಡಿಕಾರಿದರು.

ತಾಲೂಕಿನ ಗುಯಿಲಾಳು ಟೋಲ್ ಬಳಿಯ ಖಾಸಗಿ ಹೋಟೆಲಿನಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅವರ ಕೈಯಲ್ಲಿ ಈ ಅಭಿವೃಧ್ದಿ ಯೋಜನೆಗಳು ಜಾರಿಗೆ ತರಲು ಆಗಲಿಲ್ಲ ಅಂದಮೇಲೆ ಜನಪರ ಯೋಜನೆಗಳನ್ನು ಸ್ವಾಗತ ಮಾಡಬೇಕು. ಅದನ್ನು ಬಿಟ್ಟು ಮಹಿಳೆಯರು ದಾರಿ ತಪ್ಪುತ್ತಿದ್ದಾರೆಂದು ಮಾತನಾಡುವುದು ಖಂಡನೀಯ.
ಮಹಿಳೆಯರಿಂದ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ. ಮಹಿಳೆಯರ ಬಗ್ಗೆ ಹೇಳಿಕೆ ನೀಡಿ, ವಿರೋಧವ್ಯಕ್ತವಾದ ಬಳಿಕ ಕಾಂಗ್ರೆಸ್ ನವರು ಹೇಳಿಕೆ ತಿರುಚಿದ್ದಾರೆ ಎಂಬುದು ನಾಚಿಕೆಗೇಡಿನ ಎಂದು ವಾಗ್ದಾಳಿ ನಡೆಸಿದರು.

 

ರಾಜ್ಯ ಸರಕಾರ ಜಾರಿಗೆ ಬಂದು ಹತ್ತು ತಿಂಗಳಲ್ಲಿ ನಾವು ಜನತೆಗೆ ಕೊಟ್ಟ ಭರವಸೆ ಈಡೇರಿಸಿ, ನುಡಿದಂತೆ ನಡೆದಿದ್ದೇವೆ. ಸರಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತೇವೆ. ಆದರೆ ನಿಮ್ಮ ಸಾಧನೆ ಏನು? ನಿಮಗೆ ಏಕೆ ಮತ ನೀಡಬೇಕು? ಎಂದು ಬಿಜೆಪಿಯನ್ನು ಪ್ರಶ್ನಿಸಿದರು. ಬಿಜೆಪಿ ಪೊಳ್ಳು ಭರವಸೆಗಳ ಹೇಳಿಕೆ ನೀಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದು, ದೇಶದ ಜನತೆ ಎಚ್ಚೆತ್ತುಕೊಂಡಿದ್ದಾರೆ.
ರಾಜ್ಯದಲ್ಲಿ ಮಳೆ ಇಲ್ಲದೆ ಬರಗಾಲವಿದ್ದು, ಕೇಂದ್ರ ಸರಕಾರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರೂ ನಯಾಪೈಸೆ ಬಿಡುಗಡೆ ಮಾಡಲಿಲ್ಲ. ಬರ ಪರಿಹಾರ ನೀಡದೆ ದ್ವೇಷದ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

 

ದೇಶದಲ್ಲಿ ಬದಲಾವಣೆ ಅಲೆ ಎದ್ದಿದ್ದು, ಶಾಂತಿ, ನೆಮ್ಮದಿ ಹಾಗೂ ಸಹಬಾಳ್ವೆ ಜೀವನ ನಡೆಸಬೇಕೆಂದು ಜನತೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ  ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ವಿಜಯ್ ಕುಮಾರ್, ಜಿಪಂ ಮಾಜಿ ಅಧ್ಯಕ್ಷೆ ಗೀತಾ ನಂದಿನಿ ಗೌಡ,  ಮುಖಂಡರಾದ ವಕೀಲ ಯತೀಶ್, ಗುಯಿಲಾಳು ನಾಗರಾಜಯ್ಯ,  ಖಾಲಿದ್ ಹುಸೇನ್, ಹೆಚ್.ಎಂ.ಅಜೀಂ ಪಾಷಾ ಸೇರಿದಂತೆ ಇತರರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...