Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ದುರಂತ ಹಾಗೂ ಖಂಡನೀಯ : ಸಲೀಂ ಅಹ್ಮದ್

Facebook
Twitter
Telegram
WhatsApp

ಸುದ್ದಿಒನ್, ಹಿರಿಯೂರು, ಏಪ್ರಿಲ್. 15  : ಬಡವರ ಏಳಿಗೆ ಹಾಗೂ ಮಹಿಳೆಯರ ಸಬಲೀಕರಣಕ್ಕಾಗಿ ಅನುಷ್ಠಾನಗೊಳಿಸಿದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವುದು ದುರಂತ  ಹಾಗೂ ಖಂಡನೀಯ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಕಿಡಿಕಾರಿದರು.

ತಾಲೂಕಿನ ಗುಯಿಲಾಳು ಟೋಲ್ ಬಳಿಯ ಖಾಸಗಿ ಹೋಟೆಲಿನಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅವರ ಕೈಯಲ್ಲಿ ಈ ಅಭಿವೃಧ್ದಿ ಯೋಜನೆಗಳು ಜಾರಿಗೆ ತರಲು ಆಗಲಿಲ್ಲ ಅಂದಮೇಲೆ ಜನಪರ ಯೋಜನೆಗಳನ್ನು ಸ್ವಾಗತ ಮಾಡಬೇಕು. ಅದನ್ನು ಬಿಟ್ಟು ಮಹಿಳೆಯರು ದಾರಿ ತಪ್ಪುತ್ತಿದ್ದಾರೆಂದು ಮಾತನಾಡುವುದು ಖಂಡನೀಯ.
ಮಹಿಳೆಯರಿಂದ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ. ಮಹಿಳೆಯರ ಬಗ್ಗೆ ಹೇಳಿಕೆ ನೀಡಿ, ವಿರೋಧವ್ಯಕ್ತವಾದ ಬಳಿಕ ಕಾಂಗ್ರೆಸ್ ನವರು ಹೇಳಿಕೆ ತಿರುಚಿದ್ದಾರೆ ಎಂಬುದು ನಾಚಿಕೆಗೇಡಿನ ಎಂದು ವಾಗ್ದಾಳಿ ನಡೆಸಿದರು.

 

ರಾಜ್ಯ ಸರಕಾರ ಜಾರಿಗೆ ಬಂದು ಹತ್ತು ತಿಂಗಳಲ್ಲಿ ನಾವು ಜನತೆಗೆ ಕೊಟ್ಟ ಭರವಸೆ ಈಡೇರಿಸಿ, ನುಡಿದಂತೆ ನಡೆದಿದ್ದೇವೆ. ಸರಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತೇವೆ. ಆದರೆ ನಿಮ್ಮ ಸಾಧನೆ ಏನು? ನಿಮಗೆ ಏಕೆ ಮತ ನೀಡಬೇಕು? ಎಂದು ಬಿಜೆಪಿಯನ್ನು ಪ್ರಶ್ನಿಸಿದರು. ಬಿಜೆಪಿ ಪೊಳ್ಳು ಭರವಸೆಗಳ ಹೇಳಿಕೆ ನೀಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದು, ದೇಶದ ಜನತೆ ಎಚ್ಚೆತ್ತುಕೊಂಡಿದ್ದಾರೆ.
ರಾಜ್ಯದಲ್ಲಿ ಮಳೆ ಇಲ್ಲದೆ ಬರಗಾಲವಿದ್ದು, ಕೇಂದ್ರ ಸರಕಾರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರೂ ನಯಾಪೈಸೆ ಬಿಡುಗಡೆ ಮಾಡಲಿಲ್ಲ. ಬರ ಪರಿಹಾರ ನೀಡದೆ ದ್ವೇಷದ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

 

ದೇಶದಲ್ಲಿ ಬದಲಾವಣೆ ಅಲೆ ಎದ್ದಿದ್ದು, ಶಾಂತಿ, ನೆಮ್ಮದಿ ಹಾಗೂ ಸಹಬಾಳ್ವೆ ಜೀವನ ನಡೆಸಬೇಕೆಂದು ಜನತೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ  ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ವಿಜಯ್ ಕುಮಾರ್, ಜಿಪಂ ಮಾಜಿ ಅಧ್ಯಕ್ಷೆ ಗೀತಾ ನಂದಿನಿ ಗೌಡ,  ಮುಖಂಡರಾದ ವಕೀಲ ಯತೀಶ್, ಗುಯಿಲಾಳು ನಾಗರಾಜಯ್ಯ,  ಖಾಲಿದ್ ಹುಸೇನ್, ಹೆಚ್.ಎಂ.ಅಜೀಂ ಪಾಷಾ ಸೇರಿದಂತೆ ಇತರರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!