Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬದುಕಿಗೊಂದು ಗ್ಯಾರಂಟಿ ಕೊಡಿ ಎಂದು ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ..!

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ತಾನೂ ನೀಡಿದ್ದ ಭರವಸೆಗಳ ಗ್ಯಾರಂಟಿಗಳನ್ನು ನೀಡಿದೆ. ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಅವರು ಬದುಕಿಗೆ ಗ್ಯಾರಂಟಿ ನೀಡಿ ಅಂತಿದ್ದಾರೆ.

ರಾಜ್ಯ @INCKarnataka ಸರಕಾರದ ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ. ಸರಕಾರಿ ಸೌಲಭ್ಯಗಳ ಹಂಚಿಕೆಯಲ್ಲಿನ ಅಸಮಾನತೆ, ಪಕ್ಷಪಾತವು ಅರಾಜಕತೆ ಸೃಷ್ಟಿಸಿದೆ. ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ.

ಸಾಲಸೋಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು ಬದುಕುತ್ತಿದ್ದವರು ಬೀದಿ ಪಾಲಾಗಿದ್ದಾರೆ. ನಿತ್ಯದ ಬದುಕು ಸಾಗಿಸುವುದೇ ದುಸ್ತರ ಎನ್ನುವ ಸ್ಥಿತಿಯಲ್ಲಿ ಅವರಿದ್ದಾರೆ. ಇನ್ನು, ಸರಕಾರಿ ಸಾರಿಗೆಯಷ್ಟೇ ಉತ್ತಮವಾಗಿ ಸೇವೆ ಒದಗಿಸುತ್ತಿರುವ ಖಾಸಗಿ ಬಸ್ ಜಾಲವನ್ನು ಸರಕಾರ ಹಾಳು ಮಾಡಿದೆ. ಅನೇಕರ ಬದುಕಿಗೆ ಗ್ಯಾರಂಟಿ ಇಲ್ಲದಂತೆ ಮಾಡಿದೆ.

ಈ ಬಂದ್ ನಿಂದ ಸರಕಾರಿ ಸಾರಿಗೆಗೆ ಪರ್ಯಾಯವಾಗಿದ್ದ ಖಾಸಗಿ ಸಾರಿಗೆ ಜಾಲ ಸಂಪೂರ್ಣ ಸ್ಥಗಿತವಾಗಿದೆ. ಶಾಲಾ ಮಕ್ಕಳು, ಸಾರ್ವಜನಿಕರು, ವಿಮಾನ ನಿಲ್ದಾಣಕ್ಕೆ ತೆರಳುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ್ಣು, ತರಕಾರಿ ಸೇರಿ ಅಗತ್ಯ ವಸ್ತುಗಳ ಸಾಗಣೆಯಲ್ಲಿ ವ್ಯತ್ಯಯ ಆಗಿದೆ.

 

ಸರಕಾರವು ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು. ಅವರ ಬೇಡಿಕೆಗಳು ಈಡೇರಿಸಲಾಗದ ಅಸಾಧ್ಯ ಡಿಮ್ಯಾಂಡ್ ಗಳಲ್ಲ. ಅವರಿಗೂ ಕುಟುಂಬಗಳಿವೆ, ತಂದೆತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಸರಕಾರ ಮರೆಯಬಾರದು.

ಕಾಟಾಚಾರಕ್ಕೆ ಕರೆದು ಮಾತನಾಡುವುದಲ್ಲ. ವಾಸ್ತವತೆಗೆ ತಕ್ಕಂತೆ ಕಷ್ಟದಲ್ಲಿರುವ ಅವರಿಗೆ ನೆರವಾಗಬೇಕು. ನುಡಿದಂತೆಯೇ ನಡೆದು, ‘ಗ್ಯಾರಂಟಿ ಬಾಧಿತರ’ ಬದುಕಿಗೆ ಪರಿಹಾರ ಒದಗಿಸಬೇಕು ಎನ್ನುವುದು ನನ್ನ ಆಗ್ರಹ.ತಕ್ಷಣವೇ ಬಂದ್ ನಿರತರನ್ನು ಮುಖ್ಯಮಂತ್ರಿಗಳದ ಶ್ರೀ @siddaramaiah ಅವರು, ಸಾರಿಗೆ ಸಚಿವ ಶ್ರೀ @RLR_BTM ಅವರು ಕರೆದು ಮಾತನಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!