Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಟ್ಟೆ ನೋವಿನ ಕಾರಣ ಹೇಳಿ ತನಿಖೆಗೆ ಸಹಕರಿಸಿಲ್ಲ : ಪ್ರಜ್ವಲ್ ರೇವಣ್ಣ ಮತ್ತೆ ಕಸ್ಟಡಿಗೆ

Facebook
Twitter
Telegram
WhatsApp

ಬೆಂಗಳೂರು: ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ವಶಕ್ಕೆ ಪಡೆದಿದೆ. ಕಳೆದೊಂದು ವಾರದಿಂದ ತನಿಖೆ ನಡೆಸುತ್ತಲೆ ಇದೆ. ಆದರೆ ಪ್ರಜ್ವಲ್ ರೇವಣ್ಣ ಮಾತ್ರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಕೇವಲ ಹೊಟ್ಟೆ ನೋವಿನ ಕಾರಣವನ್ನಷ್ಟೇ ಹೇಳಿದ್ದಾರಂತೆ. ಇಂದು ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅಂತ್ಯವಾಗಿದೆ. ಹೀಗಾಗಿ ಇಂದು ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ಎಸ್ಐಟಿ ಹೊಟ್ಟೆ ನೋವಿನ ವಿಚಾರವನ್ನು ತಿಳಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಎಸ್ಐಟಿ ಪರ ವಕೀಲರಾದ ಅಶೋಕ್ ನಾಯ್ಕ್ ಅವರು ಆರೋಪಿಯ ಕಸ್ಟಡಿಯನ್ನು ವಿಸ್ತರಿಸುವಂತೆ ತಿಳಿಸಿದ್ದರು. ಹೀಗಾಗಿ ಮತ್ತೆ ನಾಲ್ಕು ದಿನಗಳ ಕಾಲ ಪ್ರಜ್ವಲ್ ರೇವಣ್ಣ ಅವರ ಕಸ್ಟಡಿಯನ್ನು ವಿಸ್ತರಿಸಲಾಗಿದೆ.

ಇಂದು ವಿಚಾರಣೆ ವೇಳೆ ಕೋರ್ಟ್ ಪ್ರಜ್ವಲ್ ರೇವಣ್ಣ ಅವರಿಗೂ ಪ್ರಶ್ನೆ ಮಾಡಲಾಯ್ತು. ವಿಚಾರಣೆ ವೇಳೆ ಏನಾದರೂ ಸಮಸ್ಯೆ ಆಯ್ತಾ ಎಂದು ಪ್ರಶ್ನಿಸಿದಾಗ, ಪ್ರಜ್ವಲ್ ಇಲ್ಲ ಎಂದೇ ಹೇಳಿದ್ದಾರೆ. ಬಳಿಕ ಕೋರ್ಟ್ ಗೆ ಮನವಿ ಮಾಡಿಕೊಂಡ ವಕೀಲ ಅಶೋಕ್ ನಾಯ್ಕ್, ಆರೋಪಿ ತನಿಖೆಗೆ ಇನ್ನು ಯಾವುದೇ ರೀತಿಯ ಸಹಕಾರ ನೀಡಿಲ್ಲ. ಮೊಬೈ ಬಗ್ಗೆಯೂ ಉತ್ತರ ನೀಡಿಲ್ಲ. ಸಂತ್ರಸ್ತೆಯರ ಬಗ್ಗೆ ಕೇಳಿದ್ರೆ ಅವರ್ಯಾರನ್ನು ನಾನು ನೋಡಿಲ್ಲ ಅಂತಿದ್ದಾರೆ. ಹೀಗಾಗಿ ತನಿಖೆಯನ್ನು ಬೇರೆ ಆಯಾಮದಲ್ಲಿ ಮಾಡಬೇಕಿದೆ. ಇತರ ಆರೋಪಿಗಳ ಮುಂದೆ‌ ಮುಖಾಮುಖಿಯಾಗಿ ಕೂರಿಸಿ ವಿಚಾರಣೆ ನಡೆಸಬೇಕಾಗಿದೆ. ಹೀಗಾಗಿ ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್ ರೇವಣ್ಣ ಅವರನ್ನು ಕಸ್ಟಡಿಗೆ ಕೋಡಬೇಕೆಂದು ಕೋರ್ಟ್ ಬಳಿ ಕೇಳಿಕೊಂಡಿದ್ದರು. ಅದರಂತೆ ಮತ್ತೆ ನಾಲ್ಕು ದಿನ ಕಸ್ಟಡಿಗೆ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Hypertension : ಇವುಗಳನ್ನು ತಿಂದರೆ ಅಧಿಕ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ…!

ಸುದ್ದಿಒನ್ : ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರೆ, ಪ್ರತಿದಿನ ರಕ್ತದೊತ್ತಡದ ಔಷಧಿಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಆದರೆ ಸಮಸ್ಯೆ ಏನೆಂದರೆ, ಅಧಿಕ ರಕ್ತದೊತ್ತಡವು ಒಂದು ರೀತಿಯ ಸೈಲೆಂಟ್ ಕಿಲ್ಲರ್ ಇದ್ದಂತೆ. ಇದು ದೇಹದ ಯಾವುದೇ ಭಾಗದ ಮೇಲೆ ಯಾವಾಗ

ಈ ರಾಶಿಯವರಿಗೆ ಧನಪ್ರಾಪ್ತಿ, ಈ ರಾಶಿಗೆ ಮದುವೆ ಪ್ರಾಪ್ತಿ, ಈ ರಾಶಿಯ ದಂಪತಿಗಳಿಗೆ ಸಂತಾನ ಪ್ರಾಪ್ತಿ

ಈ ರಾಶಿಯವರಿಗೆ ಧನಪ್ರಾಪ್ತಿ, ಈ ರಾಶಿಗೆ ಮದುವೆ ಪ್ರಾಪ್ತಿ, ಈ ರಾಶಿಯ ದಂಪತಿಗಳಿಗೆ ಸಂತಾನ ಪ್ರಾಪ್ತಿ, ಈ ರಾಶಿಯವರಿಗೆ ಅತಿ ಶೀಘ್ರದಲ್ಲಿ ಉದ್ಯೋಗ ಪ್ರಾಪ್ತಿ, ಬುಧವಾರ ರಾಶಿ ಭವಿಷ್ಯ -ಜುಲೈ-3,2024 ಸೂರ್ಯೋದಯ: 05:50, ಸೂರ್ಯಾಸ್ತ

ತರುಣ್ ಸುಧೀರ್ & ಸೋನಲ್ ಮದುವೆ ಆಗ್ತಾ ಇರೋದು ಸತ್ಯ : ಮಾಲತಿ ಸುಧೀರ್ ಸ್ಪಷ್ಟನೆ

ಕಳೆದ ಕೆಲವು ದಿನಗಳಿಂದ ಗಾಂಧಿನಗರದ ಮೂಲೆ‌ ಮೂಲೆಯಲ್ಲೂ ತರುಣ್ ಸುಧೀರ್ ಅವರ ಮದುವೆಯದ್ದು ಸದ್ದು. ತರುಣ್ ಹಾಗೂ ನಟಿ ಸೋನಲ್ ಮದುವೆಯಾಗ್ತಾ ಇದ್ದಾರಂತೆ ಎಂಬ ಗುಸುಗುಸು. ಮಹಾನಟಿ ವೇದಿಕೆಯಲ್ಲೂ ಈ ಟಾಪಿಕ್ ಬಂದಾಗ ತರುಣ್

error: Content is protected !!