ಬಿಜೆಪಿ ಅಧಿಕಾರಕ್ಕೆ ಬರಲ್ಲ ಎಂದು ಅವರೇ ಹೇಳಿಕೊಂಡಿದ್ದಾರೆ : ಶ್ರೀರಾಮುಲು ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ

1 Min Read

 

ನವದೆಹಲಿ: ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂಬ ಸಚಿವ ಶ್ರೀರಾಮುಲು ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇದಕ್ಕಿಂತ ಸಂತೋಷದ ವಿಚಾರ ಬೇರೆ ಏನಿದೆ ಎಂದಿದ್ದಾರೆ.

ಬೇರೆ ಪಕ್ಷದವರು ನಮ್ಮ ಪಕ್ಷದವರ ಬಗ್ಗೆ ಮಾತನಾಡುತ್ತಿದ್ದಾರೆ. ಬಿಜೆಪಿ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲ್ಲ ಎಂದು ಅವರೇ ಹೇಳಿಕೊಂಡಿದ್ದಾರೆ. ರಾಮುಲು, ಸಿದ್ದರಾಮಯ್ಯ ಅವರ ಒಳ ಒಪ್ಪಂದ ಏನಿದೆ ಎಂಬುದು ನನಗೆ ಗೊತ್ತಿಲ್ಲ ಎಂದು ದೆಹಲಿಯಲ್ಲಿ ಮಾತನಾಡಿದ್ದಾರೆ.

ಇದೆ ವೇಳೆ ಶಿವಮೊಗ್ಗದಲ್ಲಿ ಸಾವರ್ಕರ್ ಮತ್ತು ಟಿಪ್ಪು ಫೋಟೋ ನಡುವಿನ ವಿವಾದದ ಬಗ್ಗೆ ಮಾತನಾಡಿರುವ ಡಿಕೆಶಿ, ಮುಸ್ಲಿಂ ಪ್ರದೇಶದಲ್ಲಿ ಸಾವರ್ಕರ್ ಫೋಟೋ ಯಾಕೆ ಹಾಕಬೇಕಿತ್ತು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಮ್ಮ ನಾಯಕರು ಹೇಳಿಕೆ ನೀಡಿದ್ದಾರೆ. ಅವರೇ ಹೇಳಬೇಕು. ಅವರ ಹೇಳಿಕೆಗೆ ನಾನು ಕೌಂಟರ್ ಕೊಡಲು ಹೋಗುವುದಿಲ್ಲ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *