Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಟ್ಟ ಮಾತಿನಂತೆ ನಡೆಯದಿದ್ದರೆ ಒಂದು ಕ್ಷಣವೂ ಅಧಿಕಾರಲ್ಲಿರಲು ಬಿಡುವುದಿಲ್ಲ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜೂ.22): ಐದು ಗ್ಯಾರೆಂಟಿ ಕಾರ್ಡ್‍ಗಳನ್ನು ಕೊಟ್ಟು ರಾಜ್ಯದ ಜನರಿಗೆ ಟೋಪಿ ಹಾಕಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಭರವಸೆಗಳನ್ನು ಈಡೇರಿಸಲು ಇಲ್ಲಸಲ್ಲದ ಷರತ್ತುಗಳನ್ನು ಹಾಕುತ್ತಿದೆ. ಕೊಟ್ಟ ಮಾತಿನಂತೆ ನಡೆಯದಿದ್ದರೆ ಒಂದು ಕ್ಷಣವೂ ಅಧಿಕಾರಲ್ಲಿರಲು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಗೆ ಎಚ್ಚರಿಕೆ ನೀಡಿದರು.

ತುರುವನೂರು ರಸ್ತೆಯಲ್ಲಿರುವ ರೆಡ್ಡಿ ಸಮುದಾಯ ಭವನದಲ್ಲಿ ಗುರುವಾರ ನಡೆದ ಬಿಜೆಪಿ. ಸಂಘಟನಾತ್ಮಕ ಸಭೆ ಉದ್ಘಾಟಿಸಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪನವರು ವಿಧಾನಸಭೆ ಚುನಾವಣಾ ಪೂರ್ವದಲ್ಲಿಯೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇವರುಗಳು ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಪ್ರತಿ ತಿಂಗಳು ರಾಜ್ಯದ ಬಡವರಿಗೆ ಹತ್ತು ಕೆ.ಜಿ. ಹಾಗೂ ಕೇಂದ್ರದ ಐದು ಕೆ.ಜಿ.ಅಕ್ಕಿ ಸೇರಿ ಒಟ್ಟು ಹದಿನೈದು ಕೆ.ಜಿ.ಯನ್ನು ನೀಡಬೇಕು. ಒಂದು ಕೆ.ಜಿ.ಅಕ್ಕಿ ಕಡಿಮೆಯಾದರೂ ಸುಮ್ಮನಿರಲ್ಲ.

ಕಾಂಗ್ರೆಸ್‍ನ ಗ್ಯಾರೆಂಟಿಗಳನ್ನು ನಂಬಿ ನಮ್ಮವರು ಕೆಲವರು ಓಟು ಹಾಕಿದ್ದರಿಂದ ದೊಡ್ಡ ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಈಗ ನುಡಿದಂತೆ ನಡೆದುಕೊಳ್ಳದಿದ್ದರೆ ವಿಧಾನಸಭೆ ಅಧಿವೇಶನ ಆರಂಭದ ದಿನದಿಂದ ಹತ್ತು ದಿನಗಳ ಕಾಲ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ನಮ್ಮೆಲ್ಲಾ ಮಾಜಿ ಶಾಸಕರುಗಳನ್ನು ಸೇರಿಸಿಕೊಂಡು ಬೆಳಗಿನಿಂದ ಸಂಜೆಯತನಕ ಧರಣಿ ನಡೆಸುತ್ತೇನೆಂದು ಹೇಳಿದರು.

ವಿಧಾನಸಭೆ ಚುನಾವಣೆ ಸೋಲಿನಿಂದ ನಮ್ಮ ಕಾರ್ಯಕರ್ತರು ದೃತಿಗೆಟ್ಟಿಲ್ಲ. ಮುಂದೆ ನಡೆಯುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಪಾರ್ಲಿಮೆಂಟ್ ಚುನಾವಣೆಯಲ್ಲಿ ಬಿಜೆಪಿ.ಯನ್ನು ಗೆಲ್ಲಿಸುತ್ತಾರೆಂಬ ವಿಶ್ವಾಸವಿದೆ. ಒಂದು ಕಾಲದಲ್ಲಿ ನಮ್ಮ ಪಕ್ಷ ಅಧಿಕಾರವನ್ನೇ ಕಾಣದ ಸಂದರ್ಭದಲ್ಲಿ ಸದನದ ಒಳಗೆ ಹೊರಗೆ ಹೋರಾಟ ನಡೆಸಿದ್ದೇನೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ಬಿಟ್ಟರೆ ಅನ್ಯ ಮಾರ್ಗವಿಲ್ಲ. ಜನರಿಗೆ ಮೋಸ ಮಾಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಬಂಡವಾಳವನ್ನು ಬಯಲು ಮಾಡಲಾಗುವುದು. ಇದಕ್ಕೆ ನಿಮ್ಮೆಲ್ಲರ ಸಹಕಾರ ಮುಖ್ಯ ಎಂದು ಕಾರ್ಯಕರ್ತರನ್ನು ಕೋರಿದರು.

ನಾನು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ರೈತರ ಕೃಷಿ ಪಂಪ್‍ಸೆಟ್‍ಗಳಿಗೆ ಉಚಿತ ಕರೆಂಟ್ ನೀಡಿದೆ. ಬಡವರ ಮನೆಯಲ್ಲಿ ಹೆಣ್ಣು ಮಗು ಜನಿಸಿದರೆ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದೆ. ಆದರೆ ಯಾವುದನ್ನು ಚುನಾವಣೆ ಪ್ರಚಾರಕ್ಕಾಗಿ ಬಳಸಿಕೊಳ್ಳಲಿಲ್ಲ. ಇಡಿ ವಿಶ್ವವೆ ನಮ್ಮ ದೇಶದ ಪ್ರಧಾನಿ ಮೋದಿ ಕಡೆ ನೋಡುತ್ತಿದೆ. ಅದಕ್ಕಾಗಿ ಮುಂದಿನ ವರ್ಷ ನಡೆಯಲಿರುವ ಪಾರ್ಲಿಮೆಂಟ್ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಬಿಜೆಪಿ.ಯನ್ನು ಗೆಲ್ಲಿಸಿ. ಮೂರನೆ ಬಾರಿಗೆ ಮೋದಿ ಮತ್ತೆ ಪ್ರಧಾನಿಯಾದರೆ ದೇಶದ ಚಿತ್ರಣವೇ ಬದಲಾಗಲಿದೆ ಎಂದು ನುಡಿದರು.

ಬಿಜೆಪಿ.ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಮಾತನಾಡಿ ಎಲ್ಲಾ ಪಕ್ಷಗಳು ಚುನಾವಣೆಯಲ್ಲಿ ಸೋತು ನಂತರ ಅಧಿಕಾರಕ್ಕೆ ಬರುವುದು ಸಹಜ. ಅದೇ ರೀತಿ ರಾಜ್ಯದಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಸೋತಿದೆ. ಕಾಂಗ್ರೆಸ್‍ನವರು ಸೋತೆ ಇಲ್ಲೇನೋ ಎನ್ನುವಂತೆ ಗೆದ್ದು ಬೀಗುತ್ತಿದ್ದಾರೆ. ಕತ್ತಲಾದ ಮೇಲೆ ಬೆಳಕು ಬಂದೆ ಬರುತ್ತದೆ. ಮುಂದೆ ರಾಜ್ಯದಲ್ಲಿ ಮತ್ತೆ ಬಿಜೆಪಿ.ಯನ್ನು ಅಧಿಕಾರಕ್ಕೆ ತರೋಣ. ಕಾರ್ಯಕರ್ತರು ಎದೆಗುಂದುವುದು ಬೇಡ ಎಂದು ಧೈರ್ಯ ಹೇಳಿದರು.

ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿಯೆ ರಾಜ್ಯದ ಜನರಿಗೆ ನೀಡಿದ್ದ ಐದು ಗ್ಯಾರೆಂಟಿಗಳನ್ನು ಈಡೇರಿಸದಿದ್ದರೆ ವಿಧಾನಸೌಧದ ಎದುರು ಗಾಂಧಿ ಪ್ರತಿಮೆ ಬಳಿ ಬಿ.ಎಸ್.ಯಡಿಯೂರಪ್ಪನವರ ಮುಂದಾಳತ್ವದಲ್ಲಿ ಧರಣಿ ನಡೆಸುತ್ತೇವೆ. ಮೋದಿ ದೇಶದ ಪ್ರಧಾನಿಯಾಗಿ ಒಂಬತ್ತು ವರ್ಷಗಳಾಗಿದೆ. ಕೋವಿಡ್‍ನಂತ ಕಷ್ಟದ ಸಂದರ್ಭದಲ್ಲಿ ದೇಶದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡಿ ಎಲ್ಲರ ಪ್ರಾಣ ಕಾಪಾಡಿದ್ದಾರೆ. ಭಾರತ ಬೇರೆ ದೇಶಕ್ಕೆ ಸಾಲ ಕೊಡುವಷ್ಠು ಆರ್ಥಿಕವಾಗಿ ಬಲಶಾಲಿಯಾಗಿದೆ ಎಂದರೆ ಅದಕ್ಕೆ ಪ್ರಧಾನಿ ಮೋದಿ ಕಾರಣ. ವಿಶ್ವಕ್ಕೆ ಯೋಗದ ಮಹತ್ವ ಸಾರಿದ್ದಾರೆ. ಮತ್ತೊಮ್ಮೆ ದೇಶದ ಪ್ರಧಾನಿಯನ್ನಾಗಿ ಮಾಡಬೇಕಿದೆ. ಕೇಂದ್ರದ ಸಾಧನೆಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮಾತನಾಡುತ್ತ ಜನರಿಗೆ ಸುಳ್ಳು ಆಶ್ವಾಸನೆಗಳನ್ನು ನೀಡಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಆದರೆ ಈಗ ಪ್ರತಿ ಬಡವರಿಗೆ ಹತ್ತು ಕೆ.ಜಿ.ಅಕ್ಕಿ ಕೊಡಲು ರಾಗ ಎಳೆಯುತ್ತ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ. ಹತ್ತು ಕೆ.ಜಿ.ಅಕ್ಕಿ ಕೊಡುವುದು ರಾಜ್ಯದ ಜವಾಬ್ದಾರಿ. ಕೊರೋನಾದಲ್ಲಿ ಪ್ರಧಾನಿ ಮೋದಿ ದೇಶದ ಎಂಬತ್ತು ಕೋಟಿ ಜನರಿಗೆ ಉಚಿತ ಅಕ್ಕಿ ಕೊಟ್ಟಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತದೆ. ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಅತ್ಯುತ್ತಮ ಆಡಳಿತ ನಡೆಸಿದರು. ಕಾಂಗ್ರೆಸ್ ಐದು ಗ್ಯಾರೆಂಟಿಗಳನ್ನು ಕೊಡುವತನಕ ಹೋರಾಟ ಮಾಡೋಣ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.

ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ ಚುನಾವಣೆಯಲ್ಲಿ ಸೋತೆವೆಂದು ಕಾರ್ಯಕರ್ತರು ಎದೆಗುಂದಬಾರದು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕೆಂಬ ಧೈರ್ಯ ತುಂಬುವುದಕ್ಕಾಗಿ ರಾಜ್ಯದಲ್ಲಿ ಏಳು ತಂಡಗಳು ಪ್ರವಾಸ ಮಾಡುತ್ತಿವೆ. ಕಾಂಗ್ರೆಸ್‍ನ ಐದು ಗ್ಯಾರೆಂಟಿಗಳನ್ನು ನಂಬಿ ಜನ ಮೋಸ ಹೋದರು. ಕೊಟ್ಟ ಭರವಸೆಗಳನ್ನು ಈಡೇರಿಸದಿದ್ದರೆ ಗಾಂಧಿ ಪ್ರತಿಮೆ ಎದುರು ಚಳುವಳಿ ನಡೆಸಲಾಗುವುದೆಂದರು.

ಸೋನಿಯಾಗಾಂಧಿ, ರಾಹುಲ್, ಪ್ರಿಯಾಂಕಗಾಂಧಿಗೆ ಆಡಳಿತ ಗೊತ್ತಿಲ್ಲ. ಹಣಕಾಸಿನ ವ್ಯವಹಾರ ಮೊದಲೆ ಬರಲ್ಲ. ಜು. ನಾಲ್ಕನೆ ತಾರೀಖಿನೊಳಗೆ ಗ್ಯಾರೆಂಟಿಗಳನ್ನು ರಾಜ್ಯದ ಜನರಿಗೆ ಮುಟ್ಟಿಸದಿದ್ದರೆ ಮೋಸದಾಟವನ್ನು ಬಯಲು ಮಾಡಲು ಧರಣಿ ನಡೆಸಲಾಗುವುದೆಂದು ಹೇಳಿದರು.

ಮಾಜಿ ಸಚಿವ ಬಿ.ಸಿ.ನಾಗೇಶ್ ಮಾತನಾಡುತ್ತ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾದ ಕೂಡಲೆ ಪಠ್ಯಪುಸ್ತಕದಲ್ಲಿನ ಕೆಲವು ವಿಚಾರಗಳನ್ನು ಬದಲಾವಣೆ ಮಾಡಲು ಒಪ್ಪಿಗೆ ನೀಡಿದ್ದಾರೆ. ನಮ್ಮ ಪಕ್ಷ ಅಧಿಕಾರಲ್ಲಿದ್ದಾಗ ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ತಂದಿದ್ದನ್ನು ರದ್ದುಪಡಿಸಲು ಹೊರಟಿದೆ. ಇದರಿಂದ ಸಮಾಜದ ಸಂಸ್ಕøತಿ ಹಾಳಾಗಲಿದೆ. ಸುಳ್ಳು ಆಶ್ವಾಸನೆಗಳನ್ನು ನೀಡಿ ಜನರಿಗೆ ಮೋಸ ಮಾಡುತ್ತಿದೆ. ಗ್ಯಾರೆಂಟಿಗಳನ್ನು ಕೊಡುವತನಕ ಸುಮ್ಮನೆ ಕೂರಲ್ಲ ಎಂದರು.

ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿ ಮೋದಿ ಭಾರತದ ಪ್ರಧಾನಿಯಾದ ಮೇಲೆ ಇಡಿ ವಿಶ್ವದ ಗಮನ ಸೆಳೆದಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಸಾಧನೆ ಸಂಭ್ರಮವಾಗಿದೆ. ಕಳೆದ ಒಂಬತ್ತು ವರ್ಷಗಳಿಂದ ಮೋದಿರವರು ಮಾಡುತ್ತಿರುವ ಸಾಧನೆಯನ್ನು ಮನೆ ಮನೆಗೆ ಮುಟ್ಟಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದು ನೆನಪಿಸಿದರು.

ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡುತ್ತ ನನ್ನ ಕ್ಷೇತ್ರದಲ್ಲಿ ಕೆಲವು ಕಾರ್ಯಕರ್ತರು ಹಾಗೂ ಮುಖಂಡರುಗಳು ಒಳಗಿಂದೊಳಗೆ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದರಿಂದ ನಾನು ಸೋಲು ಅನುಭವಿಸಬೇಕಾಯಿತು. ಪ್ರಧಾನಿ ಮೋದಿ ದೇಶಕ್ಕೆ ಎಷ್ಟು ಮುಖ್ಯವೋ ವಿಶ್ವಕ್ಕೆ ಅಷ್ಟೇ ಮುಖ್ಯ. ನೆಹರು, ಇಂದಿರಾಗಾಂಧಿ, ಮನಮೋಹನ್‍ಸಿಂಗ್ ವಿದೇಶಕ್ಕೆ ಹೋದರೆ ಭಿಕ್ಷುಕರಂತೆ ಕಾಣುತ್ತಿದ್ದರು. ಅದೇ ಈಗಿನ ನಮ್ಮ ಪ್ರಧಾನಿ ಹೊರದೇಶಗಳಿಗೆ ಹೋದರೆ ರತ್ನಗಂಬಳಿ ಹಾಸಿ ಸ್ವಾಗತಿಸುತ್ತಿದ್ದಾರೆ. ಪಾರ್ಲಿಮೆಂಟ್ ಚುನಾವಣೆ ಮೋದಿರವರ ಅಳಿವು-ಉಳಿವಿನ ಪ್ರಶ್ನೆಯಾಗಿರುವುದರಿಂದ ಕಾರ್ಯಕರ್ತರು ಪಕ್ಷದ ಪರವಾಗಿ ನಿಲ್ಲಬೇಕು ಎಂದರು.

ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್, ಮಾಜಿ ಸಚಿವ ರೇಣುಕಾಚಾರ್ಯ, ಮಾಜಿ ಶಾಸಕರುಗಳಾದ ತಿಪ್ಪೇಸ್ವಾಮಿ, ಪೂರ್ಣಿಮ ಶ್ರೀನಿವಾಸ್, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಮಾಜಿ ಜಿಲ್ಲಾಧ್ಯಕ್ಷ ಟಿ.ಜಿ.ನರೇಂದ್ರನಾಥ್, ಪ್ರಧಾನ ಕಾರ್ಯದರ್ಶಿಗಳಾದ ಜೈಪಾಲ್, ನರೇಂದ್ರ ಹೊನ್ನಾಳ್, ರಾಜೇಶ್‍ಬುರುಡೆಕಟ್ಟೆ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜಿ.ಟಿ.ಸುರೇಶ್ ಸಿದ್ದಾಪುರ,
ವಿವಿಧ ಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ವೇದಿಕೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!