Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆರೋಗ್ಯವೇ ಒಂದು ಆಸ್ತಿ, ಅದನ್ನು ಕಾಪಾಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ : ಡಾ.ಜಿ.ಪ್ರಶಾಂತ್

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.10 : ಈ ಆಧುನಿಕ ಪೀಳಿಗೆಯಲ್ಲಿ ನಮ್ಮ ಆರೋಗ್ಯವೇ ಒಂದು ಆಸ್ತಿ, ಇದನ್ನು ಕಾಪಾಡಿಕೊಳ್ಳುವುದು ನಮ್ಮ ಕರ್ತವ್ಯ.  ಆರು ತಿಂಗಳಿಗೊಮ್ಮೆ ವೈದ್ಯರ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ ಎಂದು ಡಾ.  ಪ್ರಶಾಂತ್ ಜಿ ಹೇಳಿದರು.

ನಗರದ ಪಾರ್ಶ್ವ ಭವನದಲ್ಲಿ ಶ್ರೀ ಗೋಡಿ ಪಾರ್ಶ್ವನಾಥ್ ಜೈನ ಶ್ವೇತಾಂಬರ ಮೂರ್ತಿ ಪೂಜಕ್ ಸಂಘ (ರಿ.) ಹಾಗೂ ಭಾರತೀಯ ಜೈನ್ ಸಂಘಟನಾ, ಚಿತ್ರದುರ್ಗ ಡಯಾಬಿಟಿಕ್ ಸೆಂಟರ್, ವಾಸವಿ ಲ್ಯಾಬ್, ಹಾಗೂ ಇಂಡಿಯಾನಾ ಹಾರ್ಟ್ ಸೆಂಟರ್ ಇವರ ಸಂಯುಕ್ತ ಆಶ್ರಯದಲ್ಲಿ ಮೆಗಾ ಹೆಲ್ತ್ ಚೆಕಪ್ ಕ್ಯಾಂಪ್ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರತಿನಿತ್ಯ ಜೀವನದಲ್ಲಿ ಧ್ಯಾನ, ವ್ಯಾಯಾಮ, ಉತ್ತಮ ಆಹಾರ ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಡಾ. ಕಾರ್ತಿಕ್ ಆರ್.ಎಸ್. ತಿಳಿಸಿದರು.

ಡಾ.ನಾರಾಯಣ ಮೂರ್ತಿ ಕಾರ್ಯಕ್ರಮವನ್ನು ಚಾಲನೆ ನೀಡಿದರು. ಸರಿಸುಮಾರು 200 ಕ್ಕೂ ಹೆಚ್ಚು ಜನರಿಗೆ ವೈದ್ಯರ ತಪಾಸಣೆ, ವಿವಿಧ ರಕ್ತ ತಪಾಸಣೆ, ಬಿಪಿ-ಶುಗರ್ ತಪಾಸಣೆ, ಹೃದಯ ತಪಾಸಣೆ, ಇಕೋ ಹಾಗೂ ಇಸಿಜಿ ತಪಾಸಣೆಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಡಾ.  ಶೀತಲ್ ಪ್ರಶಾಂತ್ ಸೇರಿದಂತೆ ಹಲವು ವೈದ್ಯಕೀಯ ಸಿಬ್ಬಂದಿ ವರ್ಗ ಮತ್ತು ಸಂಘಟನಾ ಅಧ್ಯಕ್ಷರಾದ ವಿಕ್ರಾಂತ್ ಜೈನ್, ಯೋಜನಾ ಮುಖ್ಯಸ್ಥರು ವಿಪುಲ್ ಜೈನ್ ಹಾಗೂ ಆಶಿಕ್ ಜೈನ್, ಕಾರ್ಯದರ್ಶಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment