Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಾಸನದಲ್ಲಿ ಇಂದು ಕೂಡ ಹಾರ್ಟ್ ಅಟ್ಯಾಕ್ : ಶಿವಮೊಗ್ಗದಲ್ಲೂ ಹಾಸನದ ಯುವತಿ ಬಲಿ..!

---Advertisement---

ಬೆಂಗಳೂರು: ಹಾಸನದಲ್ಲಿ ಹಾರ್ಟ್ ಅಟ್ಯಾಕ್ ಮರಣ ಮೃದಂಗ ಬಾರಿಸ್ತಾ ಇದೆ. ಪ್ರತಿ ದಿನ ಕೂಡ ಈ ಹೃದಯಾಘಾತದಿಂದ ಸಾವನ್ನಪ್ಪುತ್ತಾ ಇದ್ದಾರೆ. ಇಂದು ಕೂಡ ಹಾಸನದಲ್ಲಿ ಒಂದು ಹಾರ್ಟ್ ಅಟ್ಯಾಕ್, ಹಾಸನದವರೇ ಆದ ಮಹಿಳೆ ಶಿವಮೊಗ್ಗದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಹೊಳೆ ನರಸೀಪುರ ತಾಲೂಕಿನ ಸೋಮನಹಳ್ಳಿ ಗ್ರಾಮದ ಕೊಪ್ಪಲಿನಲ್ಲಿ ಹೃದಯಾಘಾತಕ್ಕೆ 30 ವರ್ಷದ ಸಂಜು ಎಂಬಾತ ಬಲಿಯಾಗಿದ್ದಾರೆ.

ಸಂಜುಗೆ ಇತ್ತೀಚೆಗಷ್ಟೇ ಮದುವೆಯಾಗಿದ್ದರು. ಮೂರು ತಿಂಗಳಷ್ಟೇ ಮದುವೆಯಾಗಿತ್ತು. ಆದರೆ ಈಗ ನೋಡಿದ್ರೆ ವಿಧಿ ಜೀವನ ಮಾಡುವುದಕ್ಕೂ ಬಿಟ್ಟಿಲ್ಲ. ಮೂರು ತಿಂಗಳಲ್ಲಿಯೇ ಸಾವನ್ನಪ್ಪಿದ್ದಾರೆ. ಸಂಜುಗೆ ಎದೆ ನೋವು ಕಾಣಿಸಿಕೊಂಡ ತಕ್ಷಣ ಸ್ನೇಹಿತರೆಲ್ಲ ಸೇರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗಿಲ್ಲ. ಸಂಜು ತಮ್ಮ ಜೀವನ ಮುಗಿಸಿದ್ದಾರೆ. ಹೊಸದಾಗಿ ಮದುವೆಯಾದ ಯುವತಿ ನೋವಲ್ಲಿದ್ದಾರೆ. ಹಾಸನದಲ್ಲಿ ಕೇವಲ 40 ದಿನದಲ್ಲಿ 22 ಜನರ ಸಾವಾಗಿದೆ.

ಅಷ್ಟೇ ಅಲ್ಲ ಹಾಸನ ಮೂಲದ 22 ಹರ್ಷಿತಾ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹರ್ಷಿತಾ ಒಂದೂವರೆ ತಿಂಗಳ ಬಾಣಂತಿಯಾಗಿದ್ದರು. ಬಾಣಂತನಕ್ಕಾಗಿ ಆಯನೂರು ಬಳಿಯ ಮಂಡಘಟ್ಟಕ್ಕೆ ಬಂದಿದ್ದರು. ಎರಡನೇ ಮಗುವಿನ ತಾಯೊಯಾಗಿದ್ದರು. ಆದರೆ ಇಂದು ಬೆಳಗ್ಗೆ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹರ್ಷಿತಾ ಸಾವಿನಿಂದ ಎರಡು ಮಕ್ಕಳು ಅನಾಥವಾಗಿವೆ. ಇನ್ನು ಒಂದೂವರೆ ತಿಂಗಳ ಮಗು ಈಗ ತಾಯಿಯನ್ನು ಕಳೆದುಕೊಂಡು ಏನು ಅಂತ ಗೊತ್ತಿಲ್ಲದ ವಯಸ್ಸಲ್ಲಿದೆ. ಆದರೆ ಈಗ ಮನೆಯವರಿಗೆ ಆ ಮಗುವನ್ನು ಸುಧಾರಿಸುವುದೇ ಬಹಳ ಕಷ್ಟವಾಗಿದೆ. ಒಂದು ಕಡೆ ಮಗಳು ಇಲ್ಲ ಎಂಬ ನೋವು, ಅತ್ತ ಮಗು ಒಂಟಿಯಾಗಿರುವುದು. ಈ ಹಾರ್ಟ್ ಅಟ್ಯಾಕ್ ಇನ್ನು ಯಾವಾಗ ನಿಲ್ಲುತ್ತೊ ಗೊತ್ತಿಲ್ಲ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment