Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉತ್ತರಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ : ಕಾಲ್ತುಳಿತಕ್ಕೆ 80 ಕ್ಕೂ ಹೆಚ್ಚು ಮಂದಿ ಸಾವು…!

---Advertisement---

ಸುದ್ದಿಒನ್, ಜುಲೈ. 02 : ನವದೆಹಲಿ: ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 87 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೋಲೆ ಬಾಬಾರವರ ಸತ್ಸಂಗ ಕಾರ್ಯಕ್ರಮಕ್ಕೆ ಭಕ್ತರು ಒಮ್ಮೆಲೇ ಬಂದಿದ್ದರಿಂದ ನೂಕುನುಗ್ಗಲು ಉಂಟಾಯಿತು. ಕಾಲ್ತುಳಿತದಲ್ಲಿ ಉಸಿರುಗಟ್ಟಿ ಹತ್ತಾರು ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. 15 ಮಹಿಳೆಯರು ಮತ್ತು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವರ ಮೃತದೇಹಗಳನ್ನು ಕಂಡು ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಘಟನೆಯ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಘಾತ ವ್ಯಕ್ತಪಡಿಸಿದ್ದಾರೆ. ತನಿಖೆಗೆ ಆದೇಶಿಸಿ ಸಮಿತಿ ರಚಿಸಲು ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಿಎಂ ಯೋಗಿ ತೀವ್ರ ಸಂತಾಪ ಸೂಚಿಸಿದ್ದಾರೆ.

“ಹತ್ರಾಸ್ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಹಲವರು ಪ್ರಾಣ ಕಳೆದುಕೊಂಡಿರುವುದು ತುಂಬಾ ದುಃಖಕರವಾಗಿದೆ. ಇದೊಂದು ಹೃದಯ ವಿದ್ರಾವಕ ಘಟನೆಯಾಗಿದ್ದು,. ಸಂತ್ರಸ್ತ ಕುಟುಂಬಗಳಿಗೆ ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಆದಷ್ಟು ಬೇಗ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಮತ್ತು ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಲು ಸೂಚಿಸಿದ್ದೇನೆ. ಈಗಾಗಲೇ ಸಚಿವರಾದ ಲಕ್ಷ್ಮೀನಾರಾಯಣ ಚೌಧರಿ, ಸಂದೀಪ್ ಸಿಂಗ್ ಅಲ್ಲಿಗೆ ತೆರಳಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಸಿಎಸ್ , ಡಿಜಿಪಿಗಳಿಗೂ ತೆರಳುವಂತೆ ಆದೇಶಿಸಿದ್ದೇನೆ.ಆಗ್ರಾ ಎಡಿಜಿ ನೇತೃತ್ವದಲ್ಲಿ ತನಿಖೆಗೆ ಆಯೋಗ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ತಿಳಿಸಿದ್ದಾರೆ.

ಇಟಾವಾ ಮುಖ್ಯ ವೈದ್ಯಾಧಿಕಾರಿ ಡಾ.ಉಮೇಶ್ ಕುಮಾರ್ ತ್ರಿಪಾಠಿ ಮಾತನಾಡಿ, ನಾವು ಇದುವರೆಗೆ  87 ಕ್ಕೂ ಹೆಚ್ಚು ಮೃತ ದೇಹಗಳನ್ನು ಹೊರತೆಗೆದಿದ್ದೇವೆ. ಅವರಲ್ಲಿ ಮಹಿಳೆಯರು, ಮೂವರು ಮಕ್ಕಳು ಮತ್ತು  ಪುರುಷರು ಇದ್ದಾರೆ.  ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸತ್ಸಂಗದಲ್ಲಿ ಪಾಲ್ಗೊಳ್ಳುವಾಗ ಕಾಲ್ತುಳಿತ ಸಂಭವಿಸಿದೆ ಎಂಬ ಮಾಹಿತಿ ಇದೆ. ಆದರೆ ಸಂಪೂರ್ಣ ವಿವರ ತಿಳಿದಿಲ್ಲ. ಎಂದು ಅವರು ತಿಳಿಸಿದ್ದಾರೆ. ಈ ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳೆಯೊಬ್ಬರು ಮಾತನಾಡಿ, ಸ್ಥಳೀಯ ಆಧ್ಯಾತ್ಮಿಕ ಗುರುವಿನ ಗೌರವಾರ್ಥ ಈ ಸತ್ಸಂಗವನ್ನು ಆಯೋಜಿಸಲಾಗಿತ್ತು.  ಕಾರ್ಯಕ್ರಮ ಮುಗಿಸಿ ಭಕ್ತರು ಹಿಂತಿರುಗಿದಾಗ ನೂಕುನುಗ್ಗಲು ಉಂಟಾಯಿತು ಎಂದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment