ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ತನಗೆ ಏನೇ ಕಷ್ಟ ಬಂದರು ಮಕ್ಕಳಿಗೆ ಸದಾ ಬೆಂಗಾವಲಾಗಿ ಇರುವವಳು ತಾಯಿ. ಮಕ್ಕಳಿಗೆ ಸುಖ ಸಂತೋಷ ನೀಡುವತ್ತ ಗಮನ ಹರಿಸುತ್ತಾಳೆ. ಮಕ್ಕಳನ್ನ ಬೈಯ್ಯುವಾಗ ಯಾರಾದರೂ ನಿನ್ನ ಸಾವು ಎಂಬ ಮಾತುಗಲಕನ್ನಾಡಿದರೇನೆ ಆ ತಾಯಿ ಸಹಿಸಲ್ಲ. ಆದರೆ ಈ ತಾಯಿಯ ಮನಸ್ಸು ಅದೇನಾಯ್ತೋ ಏನೋ. ತನ್ನಿಬ್ಬರು ಮಕ್ಕಳನ್ನು ಕೊಂದು, ತಾನು ಸಾವಿಗೆ ಶರಣಾಗಿದ್ದಾಳೆ. ಮನೆಗೆ ಬಂದ ಗಂಡ ಈ ದೃಶ್ಯವನ್ನೆಲ್ಲ ನೋಡಿ ತಾನೂ ನೇಣಿಗೆ ಕೊರಳೊಡ್ಡಿದ್ದಾನೆ. ಈ ಘಟನೆ ನಡೆದಿರೋದು ಯಲಹಂಕದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ.
38 ವರ್ಷ ಅವಿನಾಶ್, 30 ವರ್ಷದ ಮಮತಾ, 5 ವರ್ಷದ ಅಧೀರಾ, ಎರಡೂವರೆ ವರ್ಷದ ಮತ್ತೊಂದು ಮಗು ಸಾವನ್ನಪ್ಪಿರುವುದು. ಅವಿನಾಶ್ ಕಲಬುರಗಿ ಮೂಲದವರು. ಬೆಂಗಳೂರಿಗೆ ಬಂದು ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು. ಬದುಕು ಕಟ್ಟಿಕೊಳ್ಳಲು ಬಂದಿದ್ದವರು ಬದುಕನ್ನೇ ಅಂತ್ಯ ಮಾಡಿಕೊಂಡಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ತಾಯಿಯೇ ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಅವಿನಾಶ್ ನಿನ್ನೆ ಸಂಹೆ ತನ್ನ ಪತ್ನಿ ಮಮತಾಗೆ ಅನೇಕ ಬಾರಿ ಕರೆ ಮಾಡಿದ್ದಾರೆ. ಆದರೆ ಪತ್ನಿ ಕಾಲ್ ರಿಸೀವ್ ಮಾಡಿಲ್ಲ. ಬಳಿಕ ಮನೆಯ ಮೇಲುಗಡೆ ಇರುವವರಿಗೆ ಕರೆ ಮಾಡಿ, ತನ್ನ ಹೆಂಡತಿಗೆ ಕೊಡುವಂತೆ ಹೇಳಿದ್ದಾರೆ. ಅವರು ಬಂದು ಬಾಗಿಲು ತಟ್ಟಿದರು ತೆರೆದಿರಲಿಲ್ಲ. ಸುಮ್ಮನಾದ ಪತಿ ಅವಿನಾಶ್ ರಾತ್ರಿ ಒಂಭತ್ತರ ಸುಮಾರಿಗೆ ಬಂದು, ತನ್ನಲ್ಲಿದ್ದ ಇನ್ನೊಂದು ಕೀ ಬಳಸಿ ಒಳಗೆ ಹೋಗಿದ್ದಾರೆ. ಮಕ್ಕಳು, ಹೆಂಡತಿ ಸತ್ತಿರುವುದನ್ನು ಕಂಡು, ಹೆಂಡತಿಯನ್ನು ನೇಣು ಕುಣಿಕೆಯಿಂದ ಕೆಳಗಿಳಿಸಿ, ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಹಣಕಾಸಿನ ಸಮಸ್ಯೆಯೇ ಕುಟುಂಬದ ಸಾವಿಗರ ಕಾರಣ ಎನ್ನಲಾಗುತ್ತಿದೆ. ಸದ್ಯ ರಾಜಾನುಕುಂಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್