ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಶಿವಮೊಗ್ಗ: ಈ ಬಾರಿ ಮುಂಗಾರು, ಹಿಂಗಾರು ಮಳೆ ಕೈಕೊಟ್ಟ ಕಾರಣ ಬೇಸಿಗೆಗೂ ಮುನ್ನವೇ ಧಗೆ ಹೆಚ್ಚಾಗಿತ್ತು. ಸೂರ್ಯನ ಶಾಖಕ್ಕೆ ಭೂಮಿಯ ಉಷ್ಣಾಂಶ ಹೆಚ್ಚಾಗಿತ್ತು. ಹೀಗಾಗಿ ಜನ ಬೇಸಿಗೆ ಬಿಸಿಲಿನಿಂದ ನಾನಾ ಕಾಯಿಲೆಗಳಿಗೆ ತುತ್ತಾಗಿದ್ದರು. ಬಿಸಿಲಿನಿಂದ ಬಚಾವ್ ಆಗುವುದಕ್ಕೆ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದರು. ಬಿಸಿಲಿನ ತಾಪ ಸಹಿಸಲಾರದೆ ಮಳೆಯಾದರೂ ಬೇಗ ಬರಲಿ ಎಂದೇ ಬೇಡಿಕೊಳ್ಳುತ್ತಿದ್ದರು. ಆ ಮನವಿ ವರುಣರಾಯನಿಗೆ ಕೇಳಿಸಿದೆ.
ಯುಗಾದಿ ಸಮಯದಲ್ಲಿ ಹಲವೆಡೆ ಮಳೆ ಬಂದಿದೆ. ಇನ್ನು ಹಲವೆಡೆ ಇನ್ನು ಮಳೆ ಆಗುತ್ತಲೆ ಇದೆ. ಏಪ್ರಿಲ್ 12 ರಿಂದ 14ರವರೆಗೂ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಂದು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ, ಇನ್ನು ಹಲವೆಡೆ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಮಲೆನಾಡು ಭಾಗದ ಜನರಿಗೆ ಮಳೆರಾಯ ಜೋರಾಗಿಯೇ ತಂಪೆರೆದಿದ್ದಾನೆ. ದಾವಣಗೆರೆ, ಶಿವಮೊಗ್ಗದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಶಿವಮೊಗ್ಗದ ಸುತ್ತಮುತ್ತ ಭಾಗದಲ್ಲಿ ಗುಡುಗು ಸಿಡಿಲಿನೊಂದಿಗೆ ಧಾರಾಕಾರ ವರ್ಷಧಾರೆ ಸುರಿದಿದೆ. ಬಿರು ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನರು ಸುಮಾರು ಎರಡು ಗಂಟೆಗಳ ಕಾಲ ಸುರಿದ ವರುಣನ ಅಬ್ಬರದಿಂದ ಸಂತಸಗೊಂಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್