Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾತ್ರಿಯಿಡಿ ಸುರಿದ ಮಳೆಯಿಂದ ಸೇತುವೆಗಳು, ರೈತರ ಜಮೀನುಗಳು, ಸರಕಾರಿ ಶಾಲೆಗಳು ಜಾಲವೃತ ಹಲವು ಕಡೆ ಸಂಚಾರ ಸ್ಥಗಿತ.!

Facebook
Twitter
Telegram
WhatsApp

 

ಕುರುಗೋಡು. ಆ.2 : ಸೋಮವಾರ ರಾತ್ರಿಯಿಡಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಪಟ್ಟಣ್ಣದ ಸುತ್ತ ಮುತ್ತ ಮನೆಗಳು ಕುಸಿದು ಹಾಗೂ ರೈತರ ಜಮೀನು ಗಳಿಗೆ ಮತ್ತು ಸರಕಾರಿ ಶಾಲೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣ ದಲ್ಲಿ ಹಾನಿ ಉಂಟಾಗಿದೆ.

ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಿಗ್ಗೆ 9 ಗಂಟೆ ತನಕ ಸುರಿದ ಮಳೆಯಿಂದ ಕಲ್ಲುಕಂಬ ಗ್ರಾಮದ ರೈತರಾದ ಯಂಕಣ್ಣ, ನಾಯಕರ ದಿವಾಕರಪ್ಪ ಸೇರಿ 2 ಮನೆಯ ಗೋಡೆಗಳು ಸಂಪೂರ್ಣ ಕುಸಿದು ಬಿದ್ದಿವೆ ಯಾವುದೇ ಅಪಾಯ ಸಂಭವಿಸಿಲ್ಲ, ಇನ್ನೂ ಬಾದನಹಟ್ಟಿ ಮತ್ತು ಏರಂಗಳ್ಳಿ ಗ್ರಾಮಗಳ ಮದ್ಯದಲ್ಲಿರುವ ಹಳ್ಳದ ಸೇತುವೆ ಮುಳುಗಡೆಯಾಗಿ ಅದರ ಪಕ್ಕದಲ್ಲಿ ನೂರಾರು ರೈತರು ಭತ್ತ ನಾಟಿ ಮಾಡಲು ಜಮೀನುಗಳನ್ನು ಹದಗೋಳಿಸಿದ್ದು, ಅವುಗಳ ತುಂಬಿ ನೀರು ನುಗ್ಗಿ ಹರಿಯುತ್ತಿವೆ. ಇದರಿಂದ ಕಾಲುವೆಗಳಿಗೆ ನೀರು ಬಂದರೆ ಸಾಕು ಭತ್ತ ನಾಟಿ ಮಾಡೋಕೆ ಅಂತ ಕಾದು ಕೂತಿದ್ದ ರೈತರಿಗೆ ಈ ಮಳೆಯಿಂದ ನಷ್ಟ ಅನುಭವಿಸುವಂತಾಗಿದೆ. ಅಲ್ಲದೆ ಸಿದ್ದಮ್ಮನಹಳ್ಳಿ ಗ್ರಾಮದ ಹಳ್ಳದ ಸೇತುವೆ ಸಂಪೂರ್ಣ ಮುಳುಗಡೆ ಯಾಗಿ ನೀರು ದುಮುಖಿ ಹರಿಯುತ್ತಿದ್ದೂ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಕುಡುತೀನಿ, ಬಳ್ಳಾರಿ, ಸಂಡೂರು, ತೋರಣಗಲ್ಲು ಸೇರಿದಂತೆ ವಿವಿಧ ತಾಲೂಕು ಮತ್ತು ಗ್ರಾಮಗಳಿಗೆ ತೆರಳುವ ಜನರು ಪರದಾಡುವಂತಾಗಿದೆ.

ಇನ್ನೂ ಎಚ್. ವಿರಾಪುರ, ಸಿದ್ದಮ್ಮನಹಳ್ಳಿ ಸೇರಿದಂತೆ ಬಹುತೇಕ ಸರಕಾರಿ ಶಾಲೆಗಳಿಗೆ ಮಳೆಯ ನೀರು ನುಗ್ಗಿದ ಪರಿಣಾಮ ಸಿಮಿಂಗ್ ಫುಲ್ ನಂತೆ ಕಾಣುತ್ತಿವೆ ಇದರಿಂದ ಮಕ್ಕಳಿಗೆ ತುಂಬಾ ತೊದ್ರೆ ಯಾಗಿದೆ.

ಕುಸಿದ ಮನೆಗಳಿಗೆ ಹಾಗೂ ಜಾಲವೃತ ಗೊಂಡ ರೈತರ ಜಮೀನುಗಳಿಗೆ ತಹಸೀಲ್ದಾರ್ ರಾಘವೇಂದ್ರ ರಾವ್, ಗ್ರೇಡ್ ತಹಸೀಲ್ದಾರ್ ಮಲ್ಲೇಶಪ್ಪ, ಗ್ರಾಮಲೆಕ್ಕಿಧಿಕಾರಿಗಳು ಸ್ಥಳಕ್ಕೆ ಭೇಟಿ ಪ್ರಾಥಮಿಕ ವರದಿಯನ್ನು ಸಂಗ್ರಹಿಸಿದ್ದು ಇನ್ನೂ ಹೆಚ್ಚಿನ ಮಾಹಿತಿ ಸಿಕ್ಕಾ ನಂತರ ಸರಕಾರಕ್ಕೆ ಕಳಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!