ರಾತ್ರಿಯಿಡಿ ಸುರಿದ ಮಳೆಯಿಂದ ಸೇತುವೆಗಳು, ರೈತರ ಜಮೀನುಗಳು, ಸರಕಾರಿ ಶಾಲೆಗಳು ಜಾಲವೃತ ಹಲವು ಕಡೆ ಸಂಚಾರ ಸ್ಥಗಿತ.!

 

ಕುರುಗೋಡು. ಆ.2 : ಸೋಮವಾರ ರಾತ್ರಿಯಿಡಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಪಟ್ಟಣ್ಣದ ಸುತ್ತ ಮುತ್ತ ಮನೆಗಳು ಕುಸಿದು ಹಾಗೂ ರೈತರ ಜಮೀನು ಗಳಿಗೆ ಮತ್ತು ಸರಕಾರಿ ಶಾಲೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣ ದಲ್ಲಿ ಹಾನಿ ಉಂಟಾಗಿದೆ.

ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಿಗ್ಗೆ 9 ಗಂಟೆ ತನಕ ಸುರಿದ ಮಳೆಯಿಂದ ಕಲ್ಲುಕಂಬ ಗ್ರಾಮದ ರೈತರಾದ ಯಂಕಣ್ಣ, ನಾಯಕರ ದಿವಾಕರಪ್ಪ ಸೇರಿ 2 ಮನೆಯ ಗೋಡೆಗಳು ಸಂಪೂರ್ಣ ಕುಸಿದು ಬಿದ್ದಿವೆ ಯಾವುದೇ ಅಪಾಯ ಸಂಭವಿಸಿಲ್ಲ, ಇನ್ನೂ ಬಾದನಹಟ್ಟಿ ಮತ್ತು ಏರಂಗಳ್ಳಿ ಗ್ರಾಮಗಳ ಮದ್ಯದಲ್ಲಿರುವ ಹಳ್ಳದ ಸೇತುವೆ ಮುಳುಗಡೆಯಾಗಿ ಅದರ ಪಕ್ಕದಲ್ಲಿ ನೂರಾರು ರೈತರು ಭತ್ತ ನಾಟಿ ಮಾಡಲು ಜಮೀನುಗಳನ್ನು ಹದಗೋಳಿಸಿದ್ದು, ಅವುಗಳ ತುಂಬಿ ನೀರು ನುಗ್ಗಿ ಹರಿಯುತ್ತಿವೆ. ಇದರಿಂದ ಕಾಲುವೆಗಳಿಗೆ ನೀರು ಬಂದರೆ ಸಾಕು ಭತ್ತ ನಾಟಿ ಮಾಡೋಕೆ ಅಂತ ಕಾದು ಕೂತಿದ್ದ ರೈತರಿಗೆ ಈ ಮಳೆಯಿಂದ ನಷ್ಟ ಅನುಭವಿಸುವಂತಾಗಿದೆ. ಅಲ್ಲದೆ ಸಿದ್ದಮ್ಮನಹಳ್ಳಿ ಗ್ರಾಮದ ಹಳ್ಳದ ಸೇತುವೆ ಸಂಪೂರ್ಣ ಮುಳುಗಡೆ ಯಾಗಿ ನೀರು ದುಮುಖಿ ಹರಿಯುತ್ತಿದ್ದೂ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಕುಡುತೀನಿ, ಬಳ್ಳಾರಿ, ಸಂಡೂರು, ತೋರಣಗಲ್ಲು ಸೇರಿದಂತೆ ವಿವಿಧ ತಾಲೂಕು ಮತ್ತು ಗ್ರಾಮಗಳಿಗೆ ತೆರಳುವ ಜನರು ಪರದಾಡುವಂತಾಗಿದೆ.

ಇನ್ನೂ ಎಚ್. ವಿರಾಪುರ, ಸಿದ್ದಮ್ಮನಹಳ್ಳಿ ಸೇರಿದಂತೆ ಬಹುತೇಕ ಸರಕಾರಿ ಶಾಲೆಗಳಿಗೆ ಮಳೆಯ ನೀರು ನುಗ್ಗಿದ ಪರಿಣಾಮ ಸಿಮಿಂಗ್ ಫುಲ್ ನಂತೆ ಕಾಣುತ್ತಿವೆ ಇದರಿಂದ ಮಕ್ಕಳಿಗೆ ತುಂಬಾ ತೊದ್ರೆ ಯಾಗಿದೆ.

ಕುಸಿದ ಮನೆಗಳಿಗೆ ಹಾಗೂ ಜಾಲವೃತ ಗೊಂಡ ರೈತರ ಜಮೀನುಗಳಿಗೆ ತಹಸೀಲ್ದಾರ್ ರಾಘವೇಂದ್ರ ರಾವ್, ಗ್ರೇಡ್ ತಹಸೀಲ್ದಾರ್ ಮಲ್ಲೇಶಪ್ಪ, ಗ್ರಾಮಲೆಕ್ಕಿಧಿಕಾರಿಗಳು ಸ್ಥಳಕ್ಕೆ ಭೇಟಿ ಪ್ರಾಥಮಿಕ ವರದಿಯನ್ನು ಸಂಗ್ರಹಿಸಿದ್ದು ಇನ್ನೂ ಹೆಚ್ಚಿನ ಮಾಹಿತಿ ಸಿಕ್ಕಾ ನಂತರ ಸರಕಾರಕ್ಕೆ ಕಳಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.

suddionenews

Recent Posts

ನೆನೆಸಿದ ಒಣದ್ರಾಕ್ಷಿ ತಿನ್ನುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಒಣದ್ರಾಕ್ಷಿ ಅನೇಕ ಪೋಷಕಾಂಶಗಳನ್ನು ಮತ್ತು ಔಷಧೀಯ ಗುಣಗಳನ್ನು ಹೊಂದಿವೆ. ಅವುಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.…

1 hour ago

ಈ ರಾಶಿಯ ನವದಂಪತಿಗಳು ಹೊಂದಿಕೊಳ್ಳುವುದೇ ಕಷ್ಟ

ಈ ರಾಶಿಯವರ ಮಧ್ಯವರ್ತಿಗಳ ಆದಾಯ ಚೇತರಿಕೆ, ಈ ರಾಶಿಯ ನವದಂಪತಿಗಳು ಹೊಂದಿಕೊಳ್ಳುವುದೇ ಕಷ್ಟ, ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025…

2 hours ago

ಬೆಲೆಯೇರಿಕೆಯಾಗಲು ಕೇಂದ್ರದ ಬಿಜೆಪಿ ಸರ್ಕಾರ ಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೀದರ್,(ಏಪ್ರಿಲ್ 16): ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…

10 hours ago

ಹೊಳಲ್ಕೆರೆ : ಶ್ರೀ ಹರಿಮತಿ ಚೌಡೇಶ್ವರಿ ಅಮ್ಮನವರ  ಜಾತ್ರೆ ಸಂಪನ್ನ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 16 : ಹೊಳಲ್ಕೆರೆ…

14 hours ago

ಬೆಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ…

14 hours ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಲಸಿಕಾಕರಣ

ಚಿತ್ರದುರ್ಗ. ಏ.16: ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99…

14 hours ago