Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸೆ.23ರ ತನಕ ಚಿಕ್ಕಮಗಳೂರು, ಉಡುಪಿ ಭಾಗದಲ್ಲಿ ಜೋರು ಮಳೆ : ಬೇರೆ ಜಿಲ್ಲೆಯಲ್ಲಿ ಹೇಗಿರಲಿದೆ..?

---Advertisement---

ಬೆಂಗಳೂರು: ಮುಂಗಾರು ಮಳೆ ಹೇಳುವುದಕ್ಕೆ ಹೆಸರಿಲ್ಲದಂತೆ ಕಾಣೆಯಾಗಿದೆ. ಮೊನ್ನೆ ಮೊನ್ನೆಯಷ್ಟೇ ಮಳೆ ಬಂದಂತೆ ಆಯಿತು, ಆದರೆ ಮತ್ತೆ ನಾಪತ್ತೆಯಾಗಿದೆ. ಈಗಾಗಲೇ ರಾಜ್ಯ ಸರ್ಕಾರ ಕೂಡ ಹಲವು ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದೆ. ಈ ನಡುವೆ ಅಲ್ಲೊಮ್ಮೆ ಇಲ್ಲೊಮ್ಮೆ ಮಳೆ ದರ್ಶನ ಕೊಟ್ಟು ಕೊಟ್ಟು ಹೋಗುತ್ತಿದೆ. ಹವಮಾನ ಇಲಾಖೆಯ ಮಾಹಿತಿ ಪ್ರಕಾರ, ಸೆಪ್ಟೆಂಬರ್ 23ರ ತನಕ ಕೆಲವು ಜಿಲ್ಲೆಗಳಲ್ಲಿ ಮಳೆ ಬರಲಿದೆ.

 

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಮಳೆಯ ಪ್ರಮಾಣ ಜೋರಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್23 ರ ತನಕ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನಿನ್ನೆ ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಿದೆ‌.

ಕರಾವಳಿ ಭಾಗದಲ್ಲಿ ಮುಂದಿನ 24 ಗಂಟೆಯಲ್ಲಿ ಬಿರುಗಾಳಿ ಸಹಿತ ಜೋರು ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಲಾಗಿದೆ. ಬೆಂಗಳೂರು ಭಾಗದಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿದೆ. ಹೀಗಾಗಿ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯೂ ಇದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment