Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

Facebook
Twitter
Telegram
WhatsApp

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್ ನೋಡಲು ಬರುವವರ ಕನಸಿಗೆ ಕೊಳ್ಳಿ ಇಟ್ಟಂತೆ ಆಗಿದೆ.

ದಿಢೀರನೇ ಬಂದ ಮಳೆ ಸಾರ್ವಜನಿಕರಿಗೆ ಗಲಿಬಿಲಿ ಮಾಡಿದೆ. ರಸ್ತೆ ಬದಿ ವ್ಯಾಪಾರಿಗಳಿಗೆ ಹಿಂಸೆಯಾಗಿದೆ. ವಾಹನ ಸವಾರರು ಪರದಾಡಿದ್ದಾರೆ. ಇದರ ಜೊತೆಗೆ ಇಂದು ಆರ್ಸಿಬಿ ಅಭಿಮಾನಿಗಳಿಗೆ ಹೊಟ್ಟೆ ಉರಿಸಿದೆ. ಇಂದು ಮಾಡು ಇಲ್ಲವೆ ಪಂದ್ಯ. ಆರ್ಸಿಬಿ ಪ್ಲೇ ಆಫ್ ಗೆ ಹೋಗಬೇಕೆಂದರೆ ಇಂದಿನ ಮ್ಯಾಚ್ ಗೆಲ್ಲಲೇಬೇಕಾಗಿದೆ. ಆದರೆ ಮಳೆರಾಯ ಮ್ಯಾಚ್ ಗೆ ಅಡ್ಡಿಯಾಗುವ ಸಾಧ್ಯತೆ ಇದೆ.

ಇಂದು ಸಂಜೆ 7.30ಕ್ಕೆ ಮ್ಯಾಚ್ ನಡೆಯಲಿದೆ. ಸಿಎಸ್ಕೆ ಮತ್ತು ಆರ್ಸಿಬಿ ನಡುವೆ ಬಿಗ್ ಫೈಟ್ ನಡೆಯಲಿದೆ. ಈ ಮ್ಯಾಚ್ ನಲ್ಲಿ ಆರ್ಸಿಬಿಯೇ ಗೆಲ್ಲಬೇಕು ಎಂದು ಅಭಿಮಾನಿಗಳು ಪ್ರಾರ್ಥನೆ ಕೂಡ ಮಾಡಿದ್ದಾರೆ. ದೇವರಿಗೆ ವಿಶೇಷ ಪೂಜೆ ಮಾಡಿಸಿದ್ದಾರೆ. ಇವತ್ತು ಆರ್ಸಿಬಿ ಗೆಲ್ಲಲೇಬೇಕು ದೇವರೆ ಎಂದು ವಿಶೇಷವಾಗಿ ಪ್ರಾರ್ಥನೆ ಮಾಡಿದ್ದಾರೆ. ಈ ಪಂದ್ಯವು ಎರಡೂ ತಂಡಗಳಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಸಿಎಸ್‌ಕೆ ಈ ಪಂದ್ಯದಲ್ಲಿ ಯಾವುದೇ ಅಂತರದಿಂದ ಗೆಲುವು ಸಾಧಿಸಿದರೆ ಪ್ಲೇ ಆಫ್‌ಗೆ ಪ್ರವೇಶ ಪಡೆಯಲಿದೆ. ಆದರೆ ಆರ್‌ಸಿಬಿ 18 ರನ್‌ಗಳಿಗಿಂತ ಹೆಚ್ಚು ಅಂತರದಲ್ಲಿ ಅಥವಾ 18.1 ಓವರ್‌ಗಳಿಗಿಂತ ಒಳಗೆ ಗೆಲ್ಲಬೇಕು.

ಈಗಾಗಲೇ ಮಳೆಯಾಗುತ್ತಿದ್ದು, ಅಭಿಮಾನಿಗಳಿಗೆ ಮ್ಯಾಚ್ ನೋಡುವುದಕ್ಕೂ ಅಡ್ಡಿಯಾಗಿದೆ. ಒಂದು ವೇಳೆ ಮಳೆ ಜೋರಾದರೆ ಮ್ಯಾಚ್ ರದ್ದಾಗುವ ಸಾಧ್ಯತೆಯೂ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡಬೇಕಾದವರು

error: Content is protected !!