ಸಂಜೆ ವೇಳೆಗೆ ಸಿಲಿಕಾನ್ ಸಿಟಿಯಲ್ಲಿ ಜೋರು ಮಳೆ : ಹವಮಾನ ಇಲಾಖೆಯಿಂದ ಮಳೆ ವರದಿ

1 Min Read

 

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಂಜೆ ವೇಳೆಗೆ ಜೋರು ಮಳೆ ಬಂದಿದೆ. ಇದರಿಂದ ದ್ವಿಚಕ್ರ ಸವಾರರ ಪಾಡು ಪರದಾಡುವಂತಾಗಿದೆ‌. ಆಗ ತಾನೇ ಕಚೇರಿ ಬಿಡುವವರಿಗೆ ಬೇಸರ ಕಾಡಿದೆ. ಮಳೆಯಿಂದಾಗಿ ಮನೆಗೆ ಹೋಗುವವರ ಪರಿಸ್ಥಿತಿಯೂ ಸಂಕಷ್ಟಕ್ಕೆ ಸಿಲುಕಿತ್ತು. ನಿನ್ನೆಯೆಲ್ಲ ಹವಮಾನ‌ಇಲಾಖೆ ನೀಡಿದ ವರದಿಯಲ್ಲಿ ಸಿಲಿಕಾನ್ ಸಿಟಿಗೆ ಯಾವುದೇ ರೀತಿಯ ಅಲರ್ಟ್ ನೀಡಿರಲಿಲ್ಲ. ಆದರೆ ಇಂದು ಸುರಿದ ಮಳೆಗೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಸಿಲಿಕಾನ್ ಸಿಟಿಯ ಎಲ್ಲಾ ಏರಿಯಾಗಳಲ್ಲೂ ಜೋರು ಮಳೆ ಬಂದಿದೆ.

ಇನ್ನು ಬೆಂಗಳೂರು ನಗರ ಮಾತ್ರವಲ್ಲ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ಆರು ದಿನಗಳ ಕಾಲ ರಾಜ್ಯದಲ್ಲಿ ಜೋರು ಮಳೆಯಾಗುವ ಸೂಚನೆ ನೀಡಿದೆ ಹವಮಾನ ಇಲಾಖೆ.

ಅದರಲ್ಲೂ ಉತ್ತರ ಭಾಗದ ಬಂಗಾಳ ಉಪಸಾಗರದಲ್ಲಿ ನಾಳೆ ವಾಯುಭಾರ ಕುಸಿತವಾವುವ ಕಾರಣ ಕರಾವಳಿ ಭಾಗದಲ್ಲಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಅಷ್ಟೊಂದು ಪರಿಣಾಕಾರಿಯಾಗಿ ಬೀರುವುದ. ಈ ಹಿನ್ನೆಲೆ ಸಣ್ಣ ಪ್ರಮಾಣದ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯ ಉಪಸಾಗರದಲ್ಲಿ ಮಳೆಯಾಗುತ್ತಿರುವ ಕಾರಣ ರಾಜ್ಯದಲ್ಲೂ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆಯನ್ನ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗೂ ಜೋರು ಮಳೆಯಾಗಲಿದೆ ಎಂದು ವರದಿ‌ ನೀಡಿದೆ. ಉತ್ತರ ಕರ್ನಾಟಕದ ಕೆಲ ಭಾಗದಲ್ಲಿ‌ ಮಳೆ ಹೆಚ್ಚಾಗಿ ಬೀಳಲಿದೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks