ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಬಿಸಿಲಿನ ತಾಪಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಮಳೆ ಬಂದರೆ ಸಾಕು ಎನ್ನುತ್ತಿದ್ದಾರೆ. ಯುಗಾದಿ ಹಬ್ಬದ ಹಿಂದೆ ಮುಂದೆ ಮಳೆ ಬರುವುದು ವಾಡಿಕೆ. ಆದರೆ ಈ ವಾಡಿಕೆಯ ಮಳೆ ಕೆಲವೊಂದು ಕಡೆ ಬಂದಿದೆ. ಕೆಲವೊಂದು ಕಡೆ ಬರಬೇಕಿದೆ. ಇಂದಿನಿಂದ ಹಲವು ರಾಜ್ಯಗಳಲ್ಲಿ ಏಪ್ರಿಲ್ 17ರವರೆಗೂ ಮಳೆಯಾಗುವ ಸಾಧ್ಯತೆ ಇದೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್ 15ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರ, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಳೆ ಇಲ್ಲದೆ ಕುಡಿಯುವ ನೀರಿಗೂ ಹಲವೆಡೆ ಹಾಹಾಕಾರ ಶುರುವಾಗಿದೆ. ಅಡಿಕೆ, ತೆಂಗು, ತರಕಾರಿಗೂ ನೀರಿಲ್ಲದೆ ರೈತ ಸಂಕಷ್ಟಕ್ಕೆ ಈಡಾಗಿದ್ದಾನೆ. ಉಷ್ಣಾಂಶ ಕೂಡ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಹೀಗಾಗಿ ಮಳೆಗಾಗಿ ರೈತಾಪಿ ವರ್ಗ ಮಾತ್ರವಲ್ಲ ಸಾಮಾನ್ಯ ಜನರು ಕೂಡ ಕಾಯುತ್ತಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್