Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೇಸಿಗೆಯ ನಡುವೆ ಮಳೆಯ ಅಬ್ಬರ; ಇನ್ನು ಎಷ್ಟು ದಿನ ಮುಂದುವರೆಯಲಿದೆ..!

---Advertisement---

ಬೇಸಿಗೆ ಇನ್ನು ಮುಗಿದಿಲ್ಲ. ಆದರೆ ಆಗಲೇ ಮಳೆ ಶುರುವಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ತಣ್ಣನೆಯ ಗಾಳಿ ಬೀಸಿದಂತಾಗಿದೆ. ಇನ್ನು ಮಳೆರಾಯ ನಾಳೆಯೂ ದರ್ಶನ ಕೊಡಲಿದ್ದಾನೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು – ಬಿರುಗಾಳಿ ಹಾಗೂ ಮಳೆಯ ಅಬ್ಬರ ಶುರುವಾಗಿದೆ. ಇದಕ್ಕೆಲ್ಲಾ ಕಾರಣ ಚಂಡಮಾರುತ. ತಮಿಳುನಾಡು ಹಾಗೂ ನೆರೆಹೊರೆಗಳಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತ ಇದೆ. ಇನ್ನೊಂದೆಡೆ ದಕ್ಷಿಣ ಅಂಡಮಾನ್ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆ ಇದೆ. ಹೀಗಾಗಿ ರಾಜ್ಯದ ಹಕವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ವಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಬಾರೀ ಮಳೆಯಾಗುವ ಸಾಧ್ಯತೆ ಇದೆ. ಬೇರೆ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿನೆ ಇರಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಕ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.

ಇನ್ನು ನಾಳೆಯಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಲಿದೆ. ಏಪ್ರಿಲ್ 5ರ ತನಕ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಭಾಗದಲ್ಲಿ ಹಗುರವಾದ ಮಳೆಯಾಗಲಿದೆ. ಆದರೂ ಹೊರಗೆ ಹೋಗುವವರು ಕೊಂಚ ಎಚ್ಚರದಿಂದ ಇರುವುದು ಒಳಿತು. ಮುಂಜಾಗ್ರತ ಕ್ರಮವಾಗಿ ಕೊಡೆಯನ್ನ ತೆಗೆದುಕೊಂಡು ಹೋಗಿ. ವಾಹನ ಸವಾರರಂತು ಬಹಳಷ್ಟು ಎಚ್ಚರಿಕೆ ವಹಿಸಬೇಕಾಗುತ್ತದೆ. ಯಾವಗ ಮಳೆಯಾಗಲಿದೆ ಅನ್ನೋದೆ ತಿಳಿಯುವುದಿಲ್ಲ. ಹೀಗಾಗಿ ಮಳೆಯಿಂದ ಬಚಾವ್ ಆಗುವುದಕ್ಕೆ ಸಾಧ್ಯವಾದಷ್ಟು ರೇನ್ ಕೋಟ್ ಎಲ್ಲಾ ತೆಗೆದುಕೊಂಡು ಹೋಗಿ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...