ಬೆಂಗಳೂರು: ರಾಜ್ಯದಲ್ಲಿ ಕಳೆದ ವಾರದಿಂದ ಮಳೆ ನಿರಂತರವಾಗಿ ಬರ್ತಾ ಇದೆ. ಇದರಿಂದ ಕೃಷಿ ಕೆಲಸಗಳಿಗೆ ಚಾಲನೆ ಸಿಕ್ಕಂತಾಗಿದೆ. ರೈತರು ನಗುಮುಖದಿಂದ ಹೊಲಗಳತ್ತ ಮುಖ ಮಾಡಿದ್ದಾರೆ. ಈ ಬಾರಿ ಒಳ್ಳೆಯ ಮಳೆಯಾಗಲಿದೆ ಎಂದು ಈಗಾಗಲೇ ತಿಳಿದವರು ಭವಿಷ್ಯವನ್ನು ನುಡಿದಿ ಆಗಿದೆ. ಹೀಗಾಗಿ ಭರವಸೆಯೊಂದಿಗೆ ಕೃಷಿ ಚಟುವಟಿಕೆಯಲ್ಲಿ ರೈತರು ಆಕ್ಟೀವ್ ಆಗಿದ್ದಾರೆ. ಇದರ ನಡುವೆ ರಾಜ್ಯದಲ್ಲಿ ಇನ್ನು ಎಷ್ಟು ದಿನ ಮಳೆ ಮುಂದುವರೆಯಲಿದೆ ಎಂಬುದರ ಬಗ್ಗೆ ಹವಮಾನ ಇಲಾಖೆ ಮಾಹಿತಿಯನ್ನ ನೀಡಿದೆ.
ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆರಾಯನ ಆರ್ಭಟ ಮುಂದಿವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಮೇ 27ರ ತನಕ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ತಿಳಿಸಿದೆ. ಇದರ ನಡುವೆ ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಸೂಚನೆ ನೀಡಿದೆ. ಇದರಿಂದ ಸಿಲಿಕಾನ್ ಸಿಟಿ ಮಂದಿಗೆ ನಿರಾಳ ಎನಿಸಿದೆ. ಯಾಕಂದ್ರೆ ಕಳೆದ ಕೆಲವೇ ಕೆಲವು ದಿನಗಳಿಂದ ಸುರಿದ ಸಣ್ಣ ಮಳೆಗೆ ಬೆಂಗಳೂರು ಕೆರೆಯಂತಾಗಿದೆ. ಬೋಟ್ ನಲ್ಲಿ ಜನ ಸಂಚಾರ ಮಾಡುವಂತಾಗಿದೆ. ಹಾವುಗಳ ಕಾಟಕ್ಕೆ ನೀರಿನಲ್ಲಿ ಕಾಲಿಡೋದಕ್ಕೂ ಜನ ಹೆದರುತ್ತಿದ್ದಾರೆ. ಈಗ ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ಕಡಿಮೆ ಎಂದಿದ್ದಕ್ಕೆ ಕೊಂಚ ಸಮಾಧಾನವಾಗಿದ್ದಾರೆ.
ಉಳಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














