Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೂ.20ರ ತನಕ ರಾಜ್ಯದಲ್ಲಿ ಜೋರು ಮಳೆ : ಎಲ್ಲೆಲ್ಲಿ ಎಂಬ ಮಾಹಿತಿ ಇಲ್ಲಿದೆ

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಬಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 20ರ ತನಕ ಮಳೆಯಾಗಲಿದೆ ಎಂದು ತಿಳಿಸಿದೆ. ಅದರಲ್ಲೂ ಗಂಟೆಗೆ 40-50 ಕಿಲೋ ಮೀಟರ್ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಬಿರುಗಾಳಿ ಸಹಿತ ಮಳೆಯ ಸೂಚನೆ ನೀಡಲಾಗಿದೆ. ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಸೂಚನೆ‌ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಕೊಪ್ಪಳದಲ್ಲೂ ಮಳೆ ಆಗಲಿದೆ. ಬೆಂಗಳೂರಿನಲ್ಲಿಯೂ ಜೂನ್ 20ರವರೆಗೆ ಸಾಧರಣ ಮಳೆ ಬೀಳುವ ಸಂಭವ ಇದೆ. ಸಂಜೆ ಬಳಿಕ ಬೆಂಗಳೂರಿನಲ್ಲಿ ಎಂದಿನಂತೆ ಮಳೆಯ ಮುನ್ಸೂಚನೆ‌ ಇದೆ. ಕಳೆದ ಎರಡು ದಿನದಿಂದ ನಗರದಲ್ಲಿ ಗಣನೀಯವಾಗಿ ಉಷ್ಣಾಂಶ ಇಳಿಕೆ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈಗಾಗಲೇ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ರೈತರಿಗೆ ಸಮಾಧಾನ ಸಿಕ್ಕಿದೆ. ಉಳುಮೆ ಮಾಡುವುದಕ್ಕೆ ಶುರು ಮಾಡಿದ್ದಾರೆ. ಕಳೆದ ವರ್ಷ ಮಳೆ ಸಂಪೂರ್ಣವಾಗಿ ಹೋಗಿತ್ತು. ತೀರ ಬರಗಾಲ ಅನುಭವಿಸಿದ್ದಾರೆ ಜನ. ಸದ್ಯ ಮಳೆಗಾಲ ಶುರುವಾಗಿದ್ದು, ಈ ಬಾರಿ ಉತ್ತಮ ಮಳೆಯಾಗಲಿದೆ. ಬೆಳೆಯೂ ಆಗಲಿದೆ ಎಂಬ ನಂಬಿಕೆ ರೈತರಲ್ಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

NEET PG 2024 Postponed : ಇಂದು ನಡೆಯಬೇಕಿದ್ದ ನೀಟ್ -UG ಪರೀಕ್ಷೆ ದಿಢೀರ್ ಮುಂದೂಡಿಕೆ : ಆಕ್ರೋಶಗೊಂಡ ವಿದ್ಯಾರ್ಥಿಗಳು

ನವದೆಹಲಿ : ನೀಟ್ -PG ಪರೀಕ್ಷೆಗೆ ಇಂದು ದಿನಾಂಕ ಫಿಕ್ಸ್ ಆಗಿತ್ತು. ಅದರಂತೆ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗಾಗಿ ಎಲ್ಲಾ ರೀತಿಯ ತಯಾರಿಯನ್ನು ನಡೆಸಿದ್ದರು. ಶ್ರಮವಹಿಸಿ ಓದುತ್ತಿದ್ದ ಅದೆಷ್ಟೋ ವಿದ್ಯಾರ್ಥಿಗಳಿಗೆ ದಿಢೀರನೇ ಶಾಕಿಂಗ್ ನ್ಯೂಸ್ ಒಂದು

ಈ ರಾಶಿಯವರು ಎಲ್ಲಾ ಹೊಂದಿದ್ದು ಮನಶಾಂತಿ ಇಲ್ಲ

ಈ ರಾಶಿಯವರು ಎಲ್ಲಾ ಹೊಂದಿದ್ದು ಮನಶಾಂತಿ ಇಲ್ಲ ಭಾನುವಾರ- ರಾಶಿ ಭವಿಷ್ಯ ಜೂನ್-23,2024 ಸೂರ್ಯೋದಯ: 05:47, ಸೂರ್ಯಾಸ್ತ : 06:49 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2080, ಗ್ರೀಷ್ಮ ಋತು,

ವಿಟಮಿನ್ ಡಿ ಕೊರತೆಯಿಂದ ಉಂಟಾಗುವ ಸಮಸ್ಯೆಗಳೇನು  ಗೊತ್ತಾ ?

  ಸುದ್ದಿಒನ್ :  ವಿಟಮಿನ್ ಡಿ ದೇಹಕ್ಕೆ ಪ್ರಮುಖ ಪೋಷಕಾಂಶಗಳಲ್ಲಿ ಒಂದಾಗಿದೆ. ವಿಟಮಿನ್ ಡಿ ಕೊರತೆಯು ಮಾನಸಿಕ ಆರೋಗ್ಯ ಸಮಸ್ಯೆಗಳು ಸೇರಿದಂತೆ ವಿವಿಧ ರೋಗಗಳಿಗೆ ಕಾರಣವಾಗಬಹುದು ಎಂದು ಹಲವಾರು ಅಧ್ಯಯನಗಳಿಂದ ತಿಳಿದುಬಂದಿದೆ. 20 ರಿಂದ

error: Content is protected !!