ರಾಜ್ಯದಲ್ಲಿ‌ ಇನ್ನು ಮೂರು ದಿನ ಭಾರೀ ಮಳೆಯಾಗುವ ಸೂಚನೆ

1 Min Read

 

ಬೆಂಗಳೂರು: ಕಳೆದ ಎರಡ್ಮೂರು ದಿನದಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇನ್ನು ಮೂರು ದಿನ ಮಳೆಯಾಗುವ ಸೂಚನೆ ನೀಡಿದೆ ಹವಮಾನ‌ ಇಲಾಖೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿದ್ದು, ರಾಜ್ಯದಲ್ಲಿ ಇನ್ನು ಮೂರು ದಿನ ಮಳೆ ಜೋರಾಗಲಿದೆ. ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಯಲ್ಲಿ ಮಳೆ‌ಮುಂದುವರೆಯಲಿದೆ.

ಇಂದಿನಿಂದ ಅಕ್ಟೋಬರ್18ರ ತನಕ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ಗದಗ, ರಾಯಚೂರು, ಬೀದರ್, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.

ದಕ್ಷಿಣ ಒಳನಾಡಿನಲ್ಲಿ ಕಂದು  ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿತ್ರದುರ್ಗ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಬೆಂ.ಗ್ರಾಮಾಂತರ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಇದ್ದು ಮೂರು ದಿನ ಜೋರು ಮಳೆಯ ಮುನ್ಸೂಚನೆ ನೀಡಿದೆ.

Share This Article
Leave a Comment

Leave a Reply

Your email address will not be published. Required fields are marked *