Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದಾದ್ಯಂತ ಮುಂದಿನ 3 ದಿನ ಗುಡುಗು-ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

---Advertisement---

ಸುದ್ದಿಒನ್,ಬೆಂಗಳೂರು,ಮೇ.25: ರಾಜ್ಯದ ಜನತೆಗೆ ಹವಾಮಾನ ಇಲಾಖೆ ಮಹತ್ವದ ಅಲರ್ಟ್ ಒಂದನ್ನು ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತದ ತೀವ್ರತೆಯಿಂದಾಗಿ, ಇಂದಿನಿಂದ ಸತತ ಮೂರು ದಿನಗಳ ಕಾಲ ಕರ್ನಾಟಕದಾದ್ಯಂತ ಗುಡುಗು, ಮಿಂಚು ಸಹಿತ ಧೋ ಎಂದು ಮಳೆ ಸುರಿಯುವ ಸಾಧ್ಯತೆಯಿದೆ.

ಬಾಗಲಕೋಟೆ, ಗದಗ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಭಾರಿ ಗಾಳಿಯೊಂದಿಗೆ ಆಲಿಕಲ್ಲು ಮಳೆ ಬೀಳುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಹಾಗೂ ಅನ್ನದಾತರು ಜಾಗರೂಕರಾಗಿರಲು ಕೋರಲಾಗಿದೆ. ಇದರೊಂದಿಗೆ ಉತ್ತರ ಕರ್ನಾಟಕದ ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ, ಬೆಳಗಾವಿ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಜೋರಾಗಿರಲಿದೆ.

ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಬಿರುಗಾಳಿ ಸಹಿತ ರಣಮಳೆ ಜಮಾಯಿಸಲಿದೆ. ಇತ್ತ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲೂ ವರುಣನ ಆರ್ಭಟ ಮುಂದುವರಿಯಲಿದೆ.

Join WhatsApp

Join Now

Join Telegram

Join Now