Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂಜೆ ವೇಳೆಗೆ ಬೆಂಗಳೂರಿನಲ್ಲಿ ಗುಡುಗು ಸಹಿತ ಜೋರು ಮಳೆ ; ಇನ್ನೆಷ್ಟು ದಿನ ಬರಲಿದೆ ಮಳೆ..?

---Advertisement---

 

ಬೆಂಗಳೂರು; ಬೇಸಿಗೆಯ ಬಿಸಿಯ ತಾಪ ಕಡಿಮೆಯಾಗಿ ಈಗ ಮಳೆಯ ವಾತಾವರಣ ಶುರುವಾಗಿದೆ. ಸಂಜೆಯ ವೇಳೆಗೆ ಬೆಂಗಳೂರಿನಲ್ಲಿ ಜೋರು ಮಳೆಯಾಗಿದೆ. ಅದರಲ್ಲೂ ಕೆಲಸದಿಂದ ಮನೆಗೆ ಹೋಗುವ ಸಮಯಕ್ಕೆ ಸರಿಯಾಗಿ ಜೋರು ಮಳೆಯಾಗಿದೆ. ಇದರಿಂದ ಮನೆಗೆ ಹೋಗುವ ಸಿಬ್ಬಂದಿಗಳಿಗೆ ತೊಂದರೆಯಾಗಿದೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರಿಗಂತೂ ಸಂಕಷ್ಟ ಎದುರಾಗಿದೆ. ಮಳೆಯ ಜೊತೆಗೆ ಮನೆಗೆ ಹೋಗುವಂತೆಯೂ ಇಲ್ಲ, ಮಳೆಯಲ್ಲಿ ನೆನೆಯುತ್ತಾ ಗಾಡಿ ಚಲಾಯಿಸುವುದಕ್ಕೂ ಸಾಧ್ಯವಿಲ್ಲ.

ಬೆಂಗಳೂರಿನಲ್ಲಿ ಸ್ವಲ್ಪ ಮಳೆ ಬಂದರೆ ಸಾಕು ರಸ್ತೆಗಳೆಲ್ಲ ತುಂಬಿ ತುಳುಕುತ್ತವೆ. ಇಂದು ಕೊಂಚ ಜಾಸ್ತಿಯೇ ಮಳೆ ಬಂದಿದ್ದು, ಟ್ರಾಫಿಕ್ ಜಾಸ್ತಿಯಾಗಿದೆ. ನಡೆದುಕೊಂಡು ಹೋಗುವವರಿಗೆ ಹರಿಯುವ ನೀರಿನ ಸಮಸ್ಯೆ ಎದುರಾಗಿದೆ. ಹೆಬ್ಬಾಳ, ಸಂಜಯ ನಗರ, ಆರ್.ಟಿ.ನಗರ, ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ಗಾಂಧಿನಗರ, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್, ಕಾರ್ಪೋರೇಷನ್, ಯಶವಂತಪುರ ಭಾಗದಲ್ಲಿ ಜೋರು ಮಳೆಯಾಗಿದೆ.

ರಾಜ್ಯಾದ್ಯಂತ ಮಳೆ ಇನ್ನು ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 6ರ ತನಕ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಬೇಸುಗೆಯ ಬಿಸಿಗೆ ಬೆಂದಿದ್ದ ಭೂಮಿಗೆ ಈಗ ವರುಣರಾಯ ತಣ್ಣನೆಯ ವಾತಾವರಣವನ್ನು ನಿರ್ಮಾಣ ಮಾಡಿದ್ದಾನೆ. ರಾಜ್ಯಾದ ಎಲ್ಲೆಡೆ ಉಷ್ಣಾಂಶ ಜಾಸ್ತಿಯಾಗುತ್ತು. ಈಗ ಆ ಉಷ್ಣಾಂಶವೆಲ್ಲಾ ಕಡಿಮೆಯಾಗಿದೆ. ತಣ್ಣನೆಯ ವಾತಾವರಣ ನಿರ್ಮಾಣವಾಗಿದೆ. ಇನ್ನು ಮುಂದೆ ಕೃಷಿ ಕೆಲಾಗಳು ಕೂಡ ಗರಿಗೆದರುತ್ತವೆ. ಮಳೆ ಬೆಳೆಯನ್ನು ನಂಬಿಕೊಂಡವರು ಭೂಮಿ ಉಳುಮೆಗೆ ಎಲ್ಲಾ ತಯಾರಿಯನ್ನು ಮಾಡುತ್ತಾರೆ. ಜೂನ್ ವೇಳೆಗೆ ಬೀಜ ಬಿತ್ತನೆ ಮಾಡುತ್ತಾರೆ. ಹೀಗಾಗಿ ಮಳೆಗಾಲ ಶುರುವಾಗುತ್ತಿದ್ದಂತೆ ರೈತರಿಗೆ ಖುಷಿಯಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...