Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಹಲವಡೆ ಇಂದು ಗುಡುಗು ಸಹಿತ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

---Advertisement---

ಸುದ್ದಿಒನ್,ಬೆಂಗಳೂರು,ಮೇ.26:ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಚಂಡಮಾರುತದ ಸುಳಿ ಗಾಳಿಯು ಇಡೀ ಕರ್ನಾಟಕವನ್ನು ಆವರಿಸಿಕೊಳ್ಳಲು ಸಜ್ಜಾಗಿದೆ. ಇದರ ಪ್ರಭಾವದಿಂದಾಗಿ ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಸುಡುವ ಬಿಸಿಲಿನಿಂದ ಕಂಗಾಲಾಗಿದ್ದ ಜನತೆಗೆ ಈ ವರುಣನ ಸಿಂಚನ ತಂಪಾದ ನಿರಾಳತೆ ತರಲಿದೆ.

ಕಳೆದ 48 ಗಂಟೆಗಳಿಂದ ಐಟಿ ಸಿಟಿಯಲ್ಲಿ ಆರಂಭವಾಗಿರುವ ಮಳೆಯ ಮುನಿಸು ಇಂದೂ ಕೂಡ ಮುಂದುವರಿಯಲಿದೆ. ಮಧ್ಯಾಹ್ನವಾಗುತ್ತಿದ್ದಂತೆ ಬೆಂಗಳೂರಿನ ಗಗನದಲ್ಲಿ ದಟ್ಟ ಕಾರುಮೋಡಗಳು ಬೀಡುಬಿಡಲಿವೆ. ಕತ್ತಲಾಗುತ್ತಿದ್ದಂತೆ ಗುಡುಗು-ಮಿಂಚಿನ ಆರ್ಭಟದೊಂದಿಗೆ ಸಾಧಾರಣ ಮಳೆ ಸುರಿಯುವ ಸಾಧ್ಯತೆ ದಟ್ಟವಾಗಿದೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಈ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಗುಡುಗು-ಮಿಂಚಿನ ಪ್ರಚಂಡ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಒಳನಾಡಿನ ಇತರೆ ಜಿಲ್ಲೆಗಳಲ್ಲೂ ಗಾಳಿಯ ವೇಗ ಹೆಚ್ಚಾಗಲಿದ್ದು, ಧೋ ಎಂದು ಮಳೆ ಸುರಿಯುವ ಮುನ್ಸೂಚನೆ ಇದೆ.

Join WhatsApp

Join Now

Join Telegram

Join Now