Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಮೆರಿಕಾದಲ್ಲಿ ಔಷಧಿಗಳ ಮೇಲೆ ಭಾರೀ ಸುಂಕ ಹೇರಿಕೆ : ಭಾರತ ಮೇಲೆ ಇದು ಹೇಗೆ ಪರಿಣಾಮ ಬೀರಲಿದೆ..?

---Advertisement---

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ವಸ್ತುಗಳ ಮೇಲಿನ ಸುಂಕವನ್ನ ದಿನೇ ದಿನೇ ಹೆಚ್ಚಳ ಮಾಡುತ್ತಲೇ ಇದ್ದಾರೆ. ಈಗಾಗಲೇ ಉಕ್ಕು ಮತ್ತು ಅಲ್ಯುಮಿನಿಯಮ್ ಆಮದಿನ ಮೇಲೆ ಹೆಚ್ಚುವರಿ ಸುಂಕ ನಿಗದಿ ಮಾಡಿದ್ದಾರೆ. ಇದೀಗ ತಾಮ್ರದ ಮೇಲೂ ಹೊಸದಾಗಿ ಶೇಕಡ 50 ರಷ್ಟು ಸುಂಕವನ್ನ ಘೋಷಣೆ ಮಾಡಿದ್ದಾರೆ. ಔಷಧಗಳ ಮೇಲಿನ ಸುಂಕ ಹೆಚ್ಚಳದ ಬಗ್ಗೆಯೂ ಟ್ರಂಪ್ ಈಗಲೇ ಎಚ್ಚರಿಸಿದ್ದಾರೆ. ಅದರಲ್ಲೂ ಶೇಕಡ 200 ರಷ್ಟು ಹೆಚ್ಚಾಗಬಹುದು ಎಂದು ತಿಳಿಸಿದ್ದಾರೆ. ಹಾಗಾದ್ರೆ ಅಮೆರಿಕಾದ ಅಧ್ಯಕ್ಷರ ಈ ನಿರ್ಧಾರದಿಂದ ಭಾರತಕ್ಕೆ ಆಗುವ ನಷ್ಟವೇನು ಎಂಬುದನ್ನು ನೋಡೋಣಾ.

2024-25ರಲ್ಲಿ ಭಾರತವು ಜಾಗತಿಕವಾಗಿ 2 ಬಿಲಿಯನ್ ಅಮೆರಿಕಮ್ ಡಾಲರ್ ಮೌಲ್ಯದ ತಾಮ್ರ ಮತ್ತು ತಾಮ್ರದ ಉತ್ಪನ್ನಗಳನ್ನು ರಫ್ತು ಮಾಡಿದೆ. ಈ ಪೈಕಿ 360 ಮಿಲಿಯನ್ ಅಮೆರಿಕನ್ ಡಾಲರ್ ಅಥವಾ ಶೇಕಡ 17ರಷ್ಟನ್ನು ಅಮೆರಿಕನ್ ಮಾರುಕಟ್ಟೆಗಳಿಹೆ ಭಾರತ ರಫ್ತು ಮಾಡಿದೆ. ವ್ಯಾಪಾರ ದತ್ತಾಂಶದ ಪ್ರಕಾರ, ಸೌದಿ ಅರೇಬಿಯಾ ಮತ್ತು ಚೀನಾ ನಂತರ ಅಮೆರಿಕವು ಭಾರತದ ತಾಮ್ರ ರಫ್ತಿಗೆ ಮೂರನೇ ಅತಿದೊಡ್ಡ ಮಾರುಕಟ್ಟೆಯಾಗಿದೆ. ಆದರೆ ತಾಮ್ರವು ನಿರ್ಣಾಯಕ ಖನಿಜವಾಗಿದ್ದು, ಇಂಧನ ಉತ್ಪಾದನೆ ಮತ್ತು ಮೂಲಕಸೌಕರ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಕವಾವಿ ಬಳಸಲಾಗುತ್ತದೆ.

ಹೊಸ ಸುಂಕಗಳ ನಂತರ ಅಮೆರಿಕದ ಬೇಡಿಕೆಯಲ್ಲಿನ ಯಾವುದೇ ಕುಸಿತವನ್ನು ಭಾರತದ ದೇಶೀಯ ಉದ್ಯಮವು ಹೀರಿಕೊಳ್ಳುವ ಸಾಧ್ಯತೆ ಇದೆ. ಔಷಧಿ ವಲಯ ಭಾರತಕ್ಕೆ ಹೆಚ್ಚು ಹಾನಿ ಮಾಡುತ್ತದೆ ಎಂಬುದರಲ್ಲಿ ಅನುಮಾನವಿಲ್ಲ. ಯಾಕಂದ್ರೆ ಶೇಕಡ 200 ರಷ್ಟು ಸುಂಕ ವಿಧಿಸುವುದರಿಂದ ಬೇಡಿಕೆಯ ಮೇಲೆ ತೀವ್ರ ಪರಿಣಾಮ ಬೀರಬಹುದು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment