Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಲೋ ಡಾಕ್ಟರ್ :  ಮೇ. 29 ರಂದು ನೇರ ಫೋನ್ ಇನ್

---Advertisement---

ಚಿತ್ರದುರ್ಗ. ಮೇ28 : ಜಿಲ್ಲಾಸ್ಪತ್ರೆಯಲ್ಲಿರುವ ರಕ್ತ ಕೇಂದ್ರ ಮತ್ತು ವೈದ್ಯಕೀಯ ಪ್ರಯೋಗಾಲಯದಲ್ಲಿರುವ ಸೇವಾ ಸೌಲಭ್ಯಗಳ ಕುರಿತು ಹಲೋ ಡಾಕ್ಟರ್ ಆರೋಗ್ಯದ ಅರಿವು ಇದೇ ಮೇ29ರಂದು ಬೆಳಿಗ್ಗೆ 10 ರಿಂದ 11ರವರೆಗೆ ನೇರ  ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

 

ಆಕಾಶವಾಣಿಯ ಫೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲಾಸ್ಪತ್ರೆಯ ರಕ್ತ ಕೇಂದ್ರದ ವೈದ್ಯಾಧಿಕಾರಿ ಡಾ.ರೂಪಾ ಮತ್ತು ಫೆಥಾಲಾಜಿಸ್ಟ್ ಡಾ.ಕೃಷ್ಣ ಕಿಶೋರ್ ಭಾಗವಹಿಸಲಿದ್ದು, ಆಕಾಶವಾಣಿಯ ಎಂ.ಎಸ್.ದ್ಯಾಮಲಾಂಬಿಕಾ ಅವರು ಸಂವಾದ ನಡೆಸುವರು. ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಲು 9448640273 ಹಾಗೂ 9141970272 ಗೆ ಕರೆ ಮಾಡಬಹುದಾಗಿದೆ.

 

ಸಂದರ್ಶನ ಪ್ರಸಾರ: ರಸಗೊಬ್ಬರ ಕೃತಕ ಅಭಾವ ಕಡಿವಾಣ ಹಾಕುವ ಕುರಿತು ಜಿಲ್ಲೆಯ ರೈತ ಸಂಘಟನೆಗಳಿಂದ ಜಿಲ್ಲಾಧಿಕಾರಿಗಳಿಗೆ ಮನವಿಗಳು ಸಲ್ಲಿಕೆಯಾದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ಅವರೊಂದಿಗೆ ಮುಂಗಾರು ಹಂಗಾಮಿನ ಸಿದ್ದತೆ, ರಸಗೊಬ್ಬರಗಳ ಕೃತಕ ಅಭಾವಕ್ಕೆ ಕಡಿವಾಣ ಹಾಗೂ ಮುದ್ರಿತ ಬೆಲೆಗಿಂತ ಹೆಚ್ಚು ಬೆಲೆಗೆ ಮಾರಾಟ ಮಾಡಿದವರಿಗೆ ಸೂಕ್ತ ಕ್ರಮಗಳ ಹಿನ್ನಲೆಯಲ್ಲಿ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ಅವರೊಂದಿಗೆ ಸಂದರ್ಶಕ ನವೀನ್ ಮಸ್ಕಲ್ ಮಾಡಿದ ಸಂದರ್ಶನ ಮೇ29ರಂದು ಬೆಳಿಗ್ಗೆ 8.35ಕ್ಕೆ ಚಿತ್ರದುರ್ಗ ಆಕಾಶವಾಣಿ ಕೇಂದ್ರದಿಂದ ಪ್ರಸಾರವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...