ಚಿತ್ರದುರ್ಗ. ಮೇ28 : ಜಿಲ್ಲಾಸ್ಪತ್ರೆಯಲ್ಲಿರುವ ರಕ್ತ ಕೇಂದ್ರ ಮತ್ತು ವೈದ್ಯಕೀಯ ಪ್ರಯೋಗಾಲಯದಲ್ಲಿರುವ ಸೇವಾ ಸೌಲಭ್ಯಗಳ ಕುರಿತು ಹಲೋ ಡಾಕ್ಟರ್ ಆರೋಗ್ಯದ ಅರಿವು ಇದೇ ಮೇ29ರಂದು ಬೆಳಿಗ್ಗೆ 10 ರಿಂದ 11ರವರೆಗೆ ನೇರ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಆಕಾಶವಾಣಿಯ ಫೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲಾಸ್ಪತ್ರೆಯ ರಕ್ತ ಕೇಂದ್ರದ ವೈದ್ಯಾಧಿಕಾರಿ ಡಾ.ರೂಪಾ ಮತ್ತು ಫೆಥಾಲಾಜಿಸ್ಟ್ ಡಾ.ಕೃಷ್ಣ ಕಿಶೋರ್ ಭಾಗವಹಿಸಲಿದ್ದು, ಆಕಾಶವಾಣಿಯ ಎಂ.ಎಸ್.ದ್ಯಾಮಲಾಂಬಿಕಾ ಅವರು ಸಂವಾದ ನಡೆಸುವರು. ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಲು 9448640273 ಹಾಗೂ 9141970272 ಗೆ ಕರೆ ಮಾಡಬಹುದಾಗಿದೆ.
ಸಂದರ್ಶನ ಪ್ರಸಾರ: ರಸಗೊಬ್ಬರ ಕೃತಕ ಅಭಾವ ಕಡಿವಾಣ ಹಾಕುವ ಕುರಿತು ಜಿಲ್ಲೆಯ ರೈತ ಸಂಘಟನೆಗಳಿಂದ ಜಿಲ್ಲಾಧಿಕಾರಿಗಳಿಗೆ ಮನವಿಗಳು ಸಲ್ಲಿಕೆಯಾದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ಅವರೊಂದಿಗೆ ಮುಂಗಾರು ಹಂಗಾಮಿನ ಸಿದ್ದತೆ, ರಸಗೊಬ್ಬರಗಳ ಕೃತಕ ಅಭಾವಕ್ಕೆ ಕಡಿವಾಣ ಹಾಗೂ ಮುದ್ರಿತ ಬೆಲೆಗಿಂತ ಹೆಚ್ಚು ಬೆಲೆಗೆ ಮಾರಾಟ ಮಾಡಿದವರಿಗೆ ಸೂಕ್ತ ಕ್ರಮಗಳ ಹಿನ್ನಲೆಯಲ್ಲಿ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ಅವರೊಂದಿಗೆ ಸಂದರ್ಶಕ ನವೀನ್ ಮಸ್ಕಲ್ ಮಾಡಿದ ಸಂದರ್ಶನ ಮೇ29ರಂದು ಬೆಳಿಗ್ಗೆ 8.35ಕ್ಕೆ ಚಿತ್ರದುರ್ಗ ಆಕಾಶವಾಣಿ ಕೇಂದ್ರದಿಂದ ಪ್ರಸಾರವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












