Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಮ್ಮು-ಕಾಶ್ಮೀರ ಪ್ರವಾಸಕ್ಕೆ ತೆರಳಿರುವವರ ಮಾಹಿತಿಗಾಗಿ ಸಹಾಯವಾಣಿ ಆರಂಭ

---Advertisement---

ಚಿತ್ರದುರ್ಗ. ಏ.23: ಕಾಶ್ಮೀರದ ಪಹಲ್‍ಗಾಮದಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿ. ಆದ್ದರಿಂದ ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿ ತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ.

ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು (Tour Operators & Travel Agents) ತಮ್ಮ ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಈ ಕೆಳಕಂಡ ಸಹಾಯವಾಣಿಗೆ ನೀಡಬೇಕೆಂದು ಕೋರಿದೆ.

ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು 080-43344334, 080-43344335, 080-43344336, 080-43344342 ಈ ಸಹಾಯವಾಣಿಗೆ ಮಾಹಿತಿ ನೀಡಬೇಕು ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...