Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಠ್ಯ ಪುಸ್ತಕದಲ್ಲಿ ಇನ್ಮುಂದೆ ‘ಇಂಡಿಯಾ’ ಬದಲಿಗೆ ‘ಭಾರತ್’ ಬಳಕೆ ; ಎನ್‌ಸಿಇಆರ್‌ಟಿ ನಿರ್ಧಾರ

---Advertisement---

 

ನವದೆಹಲಿ: ಇಂಡಿಯಾ ಎಂಬ ಹೆಸರನ್ನು ತೆಗೆದು ಭಾರತ್ ಎಂದು ಇಡಬೇಕು ಎಂಬ ವಾದ ಹಲವು ದಿನಗಳಿಂದಲು ನಡೆಯುತ್ತಲೆ ಇದೆ. ಸಾಕಷ್ಟು ಪರ ವಿರೋಧವೂ ಎದ್ದಿದೆ. ಇದರ ನಡುವೆ ಮಕ್ಕಳ ಶಾಲಾ ಪಠ್ಯಪುಸ್ತಕದಲ್ಲಿ ಇಂಡಿಯಾ ಬದಲು ಭಾರತ್ ಎಂದು ಬಳಸಿ ಎಂಬ ಸೂಚನೆಯನ್ನು ಎನ್ ಸಿ ಇ ಆರ್ ಟಿ ಸೂಚನೆ ನೀಡಿದೆ

ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಆ್ಯಂಡ್ ಟ್ರೈನಿಂಗ್, ಈಗಾಗಲೇ ಉನ್ನತಮಟ್ಟದ ಸಮಿತಿಯ ಅನುಮೋದನೆಯನ್ನು ಪಡೆದಿದೆ. ಹೀಗಾಗಿಯೇ ಪಠ್ಯಪುಸ್ತಕದಲ್ಲಿ ಇಂಡಿಯಾ ಬದಲು ಭಾರತ್ ಬಳಸಲು ಸೂಚನೆ ನೀಡಲಾಗಿದೆ. ಮುಂದಿನ ಪಠ್ಯಪುಸ್ತಕಗಳಲ್ಲಿ ಇಂಡಿಯಾ ಬದಲಿಗೆ ಭಾರತ್ ಎಂದು ಬದಲಿಸಲಾಗುತ್ತಿದೆ. ಅಷ್ಟೇ ಅಲ್ಲ ಪ್ರಾಚೀನ ಇತಹಾಸದ ಬದಲಿಗೆ ಶಾಸ್ತ್ರೀಯ ಇತಿಹಾಸ ಪರಿಚಯಿಸಲು ಅವಿರೋಧವಾಗಿ ಶಿಫಾರಸು ಮಾಡಿದೆ.

ಭಾರತ್ ಎಂಬುದು ಹಳೆಯ ಹೆಸರು. ಭಾರತ ಎಂಬ ಹೆಸರಿನ ಬಳಕೆಯು 7,000 ವರ್ಷಗಳಷ್ಟು ಹಳೆಯದು. ಅಂದರೆ ವಿಷ್ಣು ಪುರಾಣದಂತಹ ಪ್ರಾಚೀನ ಗ್ರಂಥಗಳಲ್ಲೂ ಕೂಡ ಅದರ ಉಲ್ಲೇಖವಿದೆ. ಹಾಗಾಗಿ, ಹೊಸ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿ ನೇಮಕ ಮಾಡಲಾಗಿದ್ದ ಏಳು ಸದಸ್ಯರ ಸಮಿತಿಯು ಸರ್ವಾನುಮತದಿಂದ ಈ ಶಿಫಾರಸು ಮಾಡಿದೆ ಎಂದು ಸಮಿತಿಯ ಅಧ್ಯಕ್ಷ ಸಿಐ ಐಸಾಕ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment