Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಾವುದೇ ಕೋಚಿಂಗ್ ಪಡೆಯದೆ ಐಎಎಸ್ ಪರೀಕ್ಷೆ ಪಾಸ್ ಮಾಡಿದ ದಾವಣಗೆರೆಯ ಸೌಭಾಗ್ಯ ಬಗ್ಗೆ ಇಲ್ಲಿದೆ ಮಾಹಿತಿ

---Advertisement---

ಧಾರವಾಡ: ಯುಪಿಎಸ್ಸಿ ಪರೀಕ್ಷೆಯ ಫಲಿತಾಂಶ ಹೊರ ಬಿದ್ದಿದ್ದು, ಧಾರವಾಡದ ವಿದ್ಯಾರ್ಥಿನಿಯೊಬ್ಬರು ರಾಜ್ಯಕ್ಕೆ 101ನೇ ರ್ಯಾಂಕ್ ಪಡೆದಿದ್ದಾರೆ. ಧಾರವಾಡದ ವಿವಿಯಲ್ಲಿ ಕೃಷಿ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಅಗ್ರಿ ಪದವಿ ಮಾಡುತ್ತಿದ್ದಾರೆ. ಆದರೆ ಮೊದಲಿನಿಂದಾನೂ ಐಎಎಸ್ ಅಧಿಕಾರಿಯಾಗಬೇಕೆಂಬ ಆಸೆ ಇಟ್ಟುಕೊಂಡಿದ್ದವರು.‌ ಇಂದು ಆ ಕನಸನ್ನು ನನಸು ಮಾಡಿಕೊಂಡಿದ್ದಾರೆ.

ಸೌಭಾಗ್ಯ ಎಸ್ ಬೀಳಗಿಮಠ ಮೂಲತಃ ದಾವಣಗೆರೆಯವರು. ಐಎಎಸ್ ಮಾಡುವ ಕನಸು ಹೊತ್ತುಕೊಂಡು ಧಾರಾವಾಡಕ್ಕೆ ಬಂದರು. 2018ಕ್ಕೆ ಧಾರವಾಡದ ವಿಶ್ವ ವಿದ್ಯಾಲಯಕ್ಕೆ ಬಂದರು. ತಮಗೆ ಶಿಕ್ಷಣ ನೀಡುವ ಪ್ರಾಧ್ಯಾಪಕರಾದ ಡಾ.ಅಶ್ವಿನಿ ಎಂ. ಅವರ ನಿವಾಸದಲ್ಲೇ ಉಳಿದು ವಿದ್ಯಾಭ್ಯಾಸ ಮಾಡಿದ ಸೌಭಾಗ್ಯ, ಅಶ್ವಿನಿ ಅವರ ಕೊಟ್ಟ ತರಬೇತಿಯನ್ನು ಪಡೆದು ಇದೀಗ ಮೊದಲ ಪ್ರಯತ್ನದಲ್ಲೇ ದೇಶದ ಅತ್ಯುನ್ನತ ಪರೀಕ್ಷೆಯಾದ ಯುಪಿಎಸ್‌ಸಿ ಪರೀಕ್ಷೆಯನ್ನು ಪಾಸು ಮಾಡಿದ್ದಾರೆ. ಇನ್ನು ಸೌಭಾಗ್ಯ ಅವರನ್ನು ತಮ್ಮ ಮನೆಯಲ್ಲೇ ಇಟ್ಟುಕೊಂಡು ಅವರಿಗೆ ತರಬೇತಿ ನೀಡಿದ ಪ್ರಾಧ್ಯಾಪಕಿ ಡಾ.ಅಶ್ವಿನಿ, ತಮ್ಮ ವಿದ್ಯಾರ್ಥಿನಿ ಮಾಡಿದ ಸಾಧನೆಗೆ ಖುಷಿ ವ್ಯಕ್ತಪಡಿಸಿದ್ದಾರೆ.

 

ಸೌಭಾಗ್ಯ ಯಾವುದೇ ತರಬೇತಿ ಪಡೆಯಲಿಲ್ಲ, ನಾನೇ ಆಕೆಗೆ ಗೊತ್ತಿದ್ದಷ್ಟು ತರಬೇತಿ ನೀಡಿದೆ. ನನ್ನ ವಿದ್ಯಾರ್ಥಿನಿ ಇಂತಹ ಸಾಧನೆ ಮಾಡಿದ್ದಕ್ಕೆ ಖುಷಿಯಾಗಿದೆ ಎಂದು ಡಾ. ಅಶ್ವಿನಿ ಅವರು ಹೇಳಿದ್ದಾರೆ. ಕಷ್ಟಪಟ್ಟು ಓದುವ ವಿದ್ಯಾರ್ಥಿನಿ ಮನಸ್ಸುಗಳಿಗೆ ಈ ರೀತಿಯ ಶಿಕ್ಷಕರು ಸಿಕ್ಕಿದರೆ ಖಂಡಿತ ಸಾಧನೆಯ ಶಿಖರಕ್ಕೆ ಏರಬಹುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...