Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುಗ..ಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ : ಹಬ್ಬದ ಆರಂಭ ಅಂತ್ಯ ಕಾಲದ ಮಾಹಿತಿ ಇಲ್ಲಿದೆ..!

Facebook
Twitter
Telegram
WhatsApp

ಯುಗ ಮತ್ತು ಆದಿ ಎಂಬ ಎರಡು ಪದಗಳು ಸೇರಿ ಹುಟ್ಟಿಕೊಂಡಿರುವ ಪದವೇ ಯುಗಾದಿ. ಈ ಹಬ್ಬವನ್ನು ಕೆಲವೆಡೆ ಉಗಾದಿ ಎಂದು ಕರೆಯುತ್ತಾರೆ. ಯುಗಾದಿಯೂ ಹೊಸ ಯುಗದ ಆರಂಭವನ್ನು ಸೂಚಿಸುತ್ತದೆ. ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್ ಗಳಲ್ಲಿ ಈ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ.

ಹಿಂದೂಗಳ ಲೆಕ್ಕಾಚಾರದಲ್ಲಿ ಯುಗಾದಿಯನ್ನೇ ಹೊಸ ವರ್ಷವೆಂದು ತಿಳಿಯಲಾಗುತ್ತದೆ. ಈ ಹೊಸ ವರ್ಷವನ್ನು ಬಡವ – ಬಲ್ಲಿದರೆಂಬ ತಾರತಮ್ಯವಿಲ್ಲದೆ ಆಚರಣೆ ಮಾಡುತ್ತಾರೆ. ಬೇವು‌- ಬೆಲ್ಲ ನೀಡಿ ಜೀವನದಲ್ಲಿ ಸಿಹಿ ಕಹಿ ಸಮಾನವಾಗಿರಲಿ ಎಂದು ಹಾರೈಸುತ್ತಾರೆ. ರೈತರು ಎತ್ತುಗಳನ್ನು ಶೃಂಗರಿಸಿ, ಮೆರವಣಿಗೆ ಮಾಡುತ್ತಾರೆ.

ಹಿಂದೂ ಪುರಾಣಗಳು ಮತ್ತು ದಂತಕಥೆಗಳ ಪ್ರಕಾರ, ಭಗವಾನ್ ಬ್ರಹ್ಮನು ಈ ದಿನದಂದು ವಿಶ್ವವನ್ನು ಸೃಷ್ಟಿಸಿದನು ಎಂದು ನಂಬುಲಾಗುತ್ತದೆ. ಬ್ರಹ್ಮಾಂಡ ವಿಕಾಸದ ಸಮಯದಲ್ಲಿ, ಸೃಷ್ಟಿಕರ್ತ ಬ್ರಹ್ಮ ಈ ದಿನದಂದು ಸೃಷ್ಟಿ ಕಾರ್ಯವನ್ನು ಪ್ರಾರಂಭಿಸಿದನು. ಇನ್ನೂ ಹಿಂದೂಗಳ ನಂಬಿಕೆಯ ಪ್ರಕಾರ, ಬ್ರಹ್ಮ ದೇವರು ಇಡೀ ವಿಶ್ವವನ್ನು ಸೃಷ್ಟಿಸಿದನು ಮತ್ತು ಭೂಮಿಯ ಮೇಲಿನ ನಮ್ಮ ಒಂದು ವರ್ಷವು ಬ್ರಹ್ಮ ದೇವರಿಗೆ ಒಂದು ದಿನಕ್ಕೆ ಸಮಾನವಾಗಿರುತ್ತದೆ. ಆದ್ದರಿಂದ, ನಾವು ಹೊಸ ವರ್ಷದ ಶುಭ ವರ್ಷವನ್ನು ಪ್ರಾರಂಭಿಸಿದಾಗ ಬ್ರಹ್ಮ ದೇವರು ಹೊಸ ದಿನವನ್ನು ಪ್ರಾರಂಭಿಸುತ್ತಾನೆ. ಇಂದಿಗೂ ಆಂಧ್ರಪ್ರದೇಶದಂತಹ ರಾಜ್ಯದಲ್ಲಿ ಯುಗಾದಿಯಂದು ಬ್ರಹ್ಮ ದೇವನನ್ನು ಪೂಜಿಸುತ್ತಾರೆ

ಈ ವರ್ಷ ಯುಗಾದಿ ಹಬ್ಬವೂ ಮಂಗಳವಾರ ರಾತ್ರಿ 10.50ಕ್ಕೆ ಆರಂಭವಾಗಿ, ಬುಧವಾರ ರಾತ್ರಿ 8.20ಕ್ಕೆ ಕೊನೆಗೊಳ್ಳಲಿದೆ. ವಸಂತಕಾಲದ ಮೊದಲ ಮಳೆ ನಂತರ ಹೊಸತನವನ್ನು ಮೈಗೂಡಿಸಿಕೊಳ್ಳುವ ಮೂಲಕ ಯುಗಾದಿಯ‌ನ್ನು ಬರಮಾಡಿಕೊಳ್ಳುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

error: Content is protected !!