Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೋಮಣ್ಣರಿಗೆ ಹೈಕಮಾಂಡ್ ಕರೆ.. ಸಮಾಧಾನ ಮಾಡುವಲ್ಲಿ ಈ ಬಾರಿಯಾದರೂ ಯಶಸ್ವಿಯಾಗುತ್ತಾರಾ ಬಿಜೆಪಿ ನಾಯಕರು..?

Facebook
Twitter
Telegram
WhatsApp

 

 

ತುಮಕೂರು: ಬಿಜೆಪಿಯಲ್ಲಿರುವ ವಿ ಸೋಮಣ್ಣ ಅವರಲ್ಲಿ ಅಸಮಾಧಾನದ ಬೆಂಕಿ ಆಗಾಗ ಹೊಗೆಯಾಡುತ್ತಲೆ ಇರುತ್ತದೆ. ಕಳೆದ ವಿಧಾನಸಭಾ ಕ್ಷೇತ್ರದಲ್ಲಿ ಬೇಡದ ಕ್ಷೇತ್ರಗಳಲ್ಲಿ ಟಿಕೆಟ್ ನೀಡಿ, ಸೋಮಣ್ಣ ಅವರ ಅಸಮಾಧಾನಕ್ಕೆ ಬಿಜೆಪಿ ಗುರಿಯಾಗಿತ್ತು. ಇದಾದ ಮೇಲೆ ಸೋಮಣ್ಣ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತಿತ್ತು. ಬಿಜೆಪಿ ನಾಯಕರು ಮನಸ್ತಾಪ ಸರಿ ಮಾಡುವುದಕ್ಕೆ ನೋಡಿದರೂ, ಅದು ಬೂದಿ ಮುಚ್ಚಿದ ಕೆಂಡದಂತೆ ಹೊಗೆಯಾಡುತ್ತಿದೆ. ಇದೀಗ ಹೈಕಮಾಂಡ್ ನಿಂದ ಮತ್ತೆ ಕರೆ ಬಂದಿದೆಯಂತೆ.

ತುಮಕೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಸೋಮಣ್ಣ ಅವರು ಹೈಕಮಾಂಡ್ ಕರೆ ಬಗ್ಗೆ ಮಾತನಾಡಿ, ನಿನ್ನೆ ವಿಜಯಪುರಕ್ಕೆ ಹೊರಟಿದ್ದಾಗ ಹೈಕಮಾಂಡ್ ನಿಂದ ಕರೆ ಬಂತು. ತುರ್ತಾಗಿ ಬರುವಂತೆ ಸೂಚನೆ ನೀಡಿದರು. ಆದರೆ ನಾನು ನಾಳೆ, ನಾಡಿದ್ದು ಬಿಟ್ಟು ಬರುತ್ತೇನೆ ಎಂದು ಹೇಳಿದ್ದೇನೆ. ಎರಡ್ಮೂರು ದಿನದಲ್ಲಿ ನನ್ನ ತಾಯಿಯ ಆರಾಧನೆ ಇದೆ. ಅದನ್ನು ಮುಗಿಸಿಕೊಂಡು ಹೋಗುತ್ತೇನೆ. ತಾಯಿ ಆರಾಧನೆ ಕಾರ್ಯಕ್ರಮ ಮುಗಿದ ದಿನ ರಾತ್ರಿ ಮತ್ತೆ ದೆಹಲಿಗೆ ಪೋನ್ ಮಾಡಿ ಡೇಟ್ ತೆಗೆದುಕೊಳ್ಳುತ್ತೇನೆ.

 

ನಾನು ಎಳೆ ಮಗುವಲ್ಲ. ಆರೇಳು ಜನ ಸಿಎಂ ಗಳ ಜೊತೆ ಕೆಲಸ ಮಾಡಿದ್ದೇನೆ. ನಲವತ್ತು ವರ್ಷ ರಾಜಕೀಯ ಅಧಿಕಾರಾವಧಿಯಲ್ಲಿ ನನ್ನ ವೈಯಕ್ತಿಕ ಬದುಕಿನಲ್ಲಿ ಯಾರೊಬ್ಬರು ಬೆಟ್ಟು ಮಾಡಿ ತೋರಿಸಿಲ್ಲ. ವಿಧಿ ಲಿಖಿತ ಏನಿದೇಯೋ ಹಾಗೇ ಆಗುತ್ತೆ. ಒಂದು ಸೂಚನೆಯೂ ಇರುವುದರಿಂದ ನಾನು ಹೆಚ್ಚಿಗೆ ಮಾತನಾಡುವುದಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

error: Content is protected !!