ಫೆ.26ಕ್ಕೆ ಡಿಸಿಎಂಗೆ ಹೈಕಮಾಂಡ್‌ ಬುಲಾವ್‌!ಶೀಘ್ರದಲ್ಲಿಯೇ ನಾಯಕತ್ವ ಬದಲಾವಣೆ?

1 Min Read

ಫೆ.26 ರಂದು ದೆಹಲಿಗೆ ಬರುವಂತೆ ಪಕ್ಷದ ಹೈಕಮಾಂಡ್ ಡಿ.ಕೆ.ಶಿವಕುಮಾರ್‌ಗೆ ಆಹ್ವಾನ ನೀಡಿದೆ.ಮುಖ್ಯಮಂತ್ರಿ ಬದಲಾವಣೆಯ ವಿಚಾರದಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

ಡಿ.ಕೆ.ಶಿವಕುಮಾರ್ ಅವರಿಗೆ ಒಳ್ಳೆಯದಾಗಲಿದೆ ಎಂದು ಡಿಸಿಎಂ ಬೆಂಬಲಿಗ ಶಾಸಕ ಇಕ್ಬಾಲ್‌ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದರು.  ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆ.26ರಂದು ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿಗೆ ಕರೆದಿರುವ ಬಗ್ಗೆ ನನಗೂ ಮಾಹಿತಿ ಇದೆ. ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆಯೇ ಚರ್ಚೆ ನಡೆಯಲಿದೆ. ಇದು 3ನೇ ಮುಹೂರ್ತ ಎಂಬುದನ್ನು ಈಗಲೇ ಹೇಳಲಾಗದು. ಆದರೆ, ಒಳ್ಳೆಯ ಸುದ್ದಿ ಸಿಗಲಿದೆ ಎಂದರು.

ಶೀಘ್ರದಲ್ಲಿಯೇ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭರವಸೆ ನೀಡಿದ್ದಾರೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಳ ಸಂತೋಷ ಎಂದು ತಿಳಿಸಿದ್ದಾರೆ.

Share This Article
Enable Notifications OK No thanks