ಹಾಸನ: ಲೋಕಸಭಾ ಚುನಾವಣೆ ಹತ್ತಿರವಿರುವಾಗಲೇ ಹಾಸನ ಸಂಸದರಾಗಿದ್ದ ಪ್ರಜ್ವಲ್ ರೇವಣ್ಣರಿಗೆ ಕಂಟಕ ಎದುರಾಗಿದೆ. ಸಂಸದ ಸ್ಥಾನದಿಂದ ವಜಾಗೊಂಡಿದ್ದಾರೆ. ಇದೀಗ ಹೈಕೋರ್ಟ್ ನಲ್ಲೂ ಹಿನ್ನಡೆಯಾಗಿದೆ. ಸಂಸದ ಸ್ಥಾನದ ಆಯ್ಕೆ ಅಸಿಂಧು ಎಂದು ಅಮಾನತು ಮಾಡಿದ್ದ ಆದೇಶ ವಜಾಗೊಳಿಸಲು ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕಾರ ಮಾಡಿದೆ.
ಮಧ್ಯಂತರ ರಿಲೀಫ್ ಮಾಡಲು ಹೈಕೋರ್ಟ್ ತಿರಸ್ಕಾರ ಮಾಡಿದೆ. ಅಮಾನತು ಆದೇಶ ಸಂಬಂಧ ಸುಪ್ರೀಂ ಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಸುವವರೆಗೂ ಆ ಆದೇಶ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ವಿಚಾರಣೆ ನಡೆಸಿದ್ದ ನ್ಯಾ. ಕೆ ನಟರಾಜನ್ ತೀರ್ಪು ಕಾಯ್ದಿರಿಸಿದ್ದರು. ಇಂದು ತೀರ್ಪು ಪ್ರಕಟವಾಗಿದ್ದು, ಸಂಸದ ಸ್ಥಾನದಿಂದ ಅನರ್ಹಗೊಳಿಸಿದ್ದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದಾರೆ.

ದೂರುದಾರ ವಕೀಲ ದೇವರಾಜೇಗೌಡ ಮಾತನಾಡಿದ್ದು, ತೀರ್ಪು ನೀಡಿದ ದಿನವೇ ಪ್ರಜ್ವಲ್ ಅರ್ಜಿ ಸಲ್ಲಿಕೆ ಮಾಡಬೇಕಿತ್ತು. ತಾಂತ್ರಿಕ ದೋಷ ಎಂದು ಕಾರಣ ಹೇಳಿ ನಾಲ್ಕು ದಿನಗಳು ತಡವಾಗಿ ಅರ್ಜಿ ಸಲ್ಲಿಸಿದರು. ಪ್ರಜ್ವಲ್ ಸದಸ್ಯತ್ವ ರದ್ದುಗೊಳಿಸಲು ಎ ಮಂಜು ಅರ್ಜಿ ಹಾಕಿದ್ದರು. ಸತ್ಯಕ್ಕೆ ಸಿಕ್ಕ ಜಯ ಎಂದು ಹೇಳುತ್ತೇನೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














