Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಿಲೀಫ್ ಕೊಟ್ಟು ಸೋನು ನಿಗಮ್ ಗೆ ಖಡಕ್ ಎಚ್ಚರಿಕೆಯನ್ನು ನೀಡಿದ ಹೈಕೋರ್ಟ್..!

---Advertisement---

ಬೆಂಗಳೂರು; ಕನ್ನಡಿಗರ ಬಗ್ಗೆ ಮಾತನಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಸೋನು ನಿಗಮ್ ಗೆ ಇದೀಗ ಕೊಂಚ ರಿಲೀಫ್ ಸಿಕ್ಕಂತೆ ಆಗಿದೆ. ಹೈಕೋರ್ಟ್ ರಿಲೀಫ್ ನೀಡಿದೆ. ಪೆಹಲ್ಗಾಮ್ ದಾಳಿಗೆ ಕನ್ನಡಿಗರನ್ನು ಹೋಲಿಕೆ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಕನ್ನಡಿಗರು ಸೋನು ನಿಗಮ್ ಹಾಡುಗಳು ಇನ್ಮುಂದೆ ನಮ್ಮ ಕರ್ನಾಟಕದಲ್ಲಿ ಕೇಳುವಂತಿಲ್ಲ ಎಂದು ಆಗ್ರಹ ಮಾಡಿದರು. ಕನ್ನಡ ಒರ ಹೋರಾಟಗಾರರ ಹೋರಾಡಕ್ಕೆ ಕನ್ನಡ ಚಿತ್ರರಂಗ ಕೂಡ ಸಮ್ಮತಿ ನೀಡಿತ್ತು‌. ಈ ಕೇಸ್ ಗೆ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ರಿಲೀಫ್ ನೀಡಿದೆ.

ಈ ಸಂಬಂಧ ಸೋನು ನಿಗಮ್ ವಿರುದ್ಧ ಬೆಂಗಳೂರು ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಈ ಪ್ರಕರಣವನ್ನು ರದ್ದು ಕೋರಿ ಸೋನು ನಿಗಮ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಸೋನು ನಿಗಮ್ ಪರವಾಗಿ ವಕೀಲ ಧನಂಜಯ್ ವಿದ್ಯಾಪತಿ ಅವರು ವಾದ ಮಂಡಿಸಿದರು. ಸರ್ಕಾರದ ಪರ ವಕೀಲ ಬಿ.ಎನ್.ಜಗದೀಶ್ ಆಕ್ಷೇಪವನ್ನು ವ್ಯಕ್ಯಪಡಿಸಿದರು‌. ಸೋನು ನಿಗಮ್ ಅವರು ಕನ್ನಡಕ್ಕೆ ಅವಮಾನ ಮಾಡುವ ಕೃತ್ಯ ಎಸಗಿಲ್ಲ. ಮಾಧ್ಯಮಗಳಲ್ಲಿ ವರದಿಯಾಗಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಯಾರೋ ಮೂರನೇ ವ್ಯಕ್ತಿ ಕೊಟ್ಟ ದೂರನ್ನು ಆಧರಿಸಿ ಕೇಸ್ ದಾಖಲಿಸಲಾಗಿದೆ. ಸೋ‌ನು ನಿಗಮ್ ಅವರು ಈಗಾಗಲೇ ಕನ್ನಡಿಗರಿಗೆ ಕ್ಷಮೆ ಕೇಳಿದ್ದಾರೆ ಎಂದು ವಾದಿಸಿದ್ದರು.

ವಾದ, ಪ್ರತಿವಾದವನ್ನು ಆಲಿಸಿದ ಹೈಕೋರ್ಟ್, ಸೋನು ನಿಗಮ್ ಅವರಿಗೆ ಬಿಗ್ ರಿಲೀಫ್ ನೀಡಿದೆ. ಪೊಲೀಸರು ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಲಾಗಿದೆ. ಅಲ್ಲದೆ ವಿಚಾರಣೆಗೆ ಸಹಕರಿಸುವಂತೆಯೂ ಸೋನು ನಿಗಮ್ ಸೂಚನೆ ನೀಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...