ದಶಕಗಳಿಂದಾನೂ ಸಿನಿಮಾಗಳಿಗೆ ಏಕರೂಪ ದರ ನಿಗದಿ ಮಾಡಬೇಕೆಂದು ಹಲವರು ಸಾಕಷ್ಟು ಹೋರಾಟ ಮಾಡಿದ್ದರು. ಆ ಹೋರಾಟದ ಫಲವಾಗಿ ಕಾಂಗ್ರೆಸ್ ಸರ್ಕಾರವೂ ಏಕರೂಪ ದರವನ್ನು ಜಾರಿಗೆ ತಂದಿತ್ತು. ಅಂದ್ರೆ ಎಲ್ಲಾ ಮಲ್ಟಿಪ್ಲೆಕ್ಸ್ ಗಳಲ್ಲೂ ಟಿಕೆಟ್ ದರವನ್ನು 200 ರೂಪಾಯಿಗೆ ನಿಗದಿ ಮಾಡಿತ್ತು. ಆದರೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಕನ್ನಡ ಚಿತ್ರರಂಗದಲ್ಲಿ ಮುಂದಿನ ದಿನಗಳಲ್ಕಿ ದೊಡ್ಡ ದೊಡ್ಡ ಸಿನಿಮಾಗಳೇ ರಿಲೀಸ್ ಆಗ್ತಾ ಇದಾವೆ. ಬಿಗ್ ಬಜೆಟ್ ಸಿನಿಮಾಗಳಲ್ಲಿ ಮೊದಲಿಗೆ ರಿಲೀಸ್ ಆಗ್ತಾ ಇರೋದು ಕಾಂತಾರ ಸಿನಿಮಾ. ಹೊಂಬಾಳೆ ನಿರ್ಮಾಣ ಸಂಸ್ಥೆ ಕೂಡ ಟಿಕೆಟ್ ದರ ಸಂಬಂಧ ಕೋರ್ಟ್ ಮೊರೆ ಹೋಗಿತ್ತು. ವಾದ ಪ್ರತಿವಾದ ಆಲಿಸಿರುವ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಸರ್ಕಾರ ತಂದಿದ್ದ ಹೊಸ ಆದೇಶ ಸೆಪ್ಟೆಂಬರ್ 12ರಿಂದ ಜಾರಿಗೆ ಬಂದಿತ್ತು. ಆದರೆ ಆದೇಶ ಜಾರಿಯಾಗಿ ಎರಡು ವಾರ ಆಗುವುದರೊಳಗೆ ಆದೇಶಕ್ಕೆ ಬ್ರೇಕ್ ಬಿದ್ದಿದೆ.
ಕಾಂತಾರಾ ಸಿನಿಮಾದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆಯೇ ಇದೆ. ಸಿನಿ ಪ್ರೇಮಿಗಳು ಕೂಡ ಈ ಚಿತ್ರಕ್ಕಾಗಿ ಕಾಯ್ತಾ ಇದ್ದಾರೆ. ಟಿಕೆಟ್ ದರ ಹೆಚ್ಚಿಗೆ ಇದ್ದರು ಈ ಸಿನಿಮಾವನ್ನು ನೋಡುವುದಕ್ಕೆ ಜನ ಬಂದೇ ಬರ್ತಾರೆ. ಹೀಗಿರುವಾಗ ಟಿಕೆಟ್ ದರ ಕಡಿಮೆ ಇದ್ದರೆ ಹೆಚ್ಚಿನ ಕಲೆಕ್ಷನ್ ಆಗುವುದಿಲ್ಲ ಅನ್ನೋದು ಹೊಂಬಾಳೆ ಸಂಸ್ಥೆಯವರಿಗೂ ಗೊತ್ತು. ಹೀಗಾಗಿಯೇ ಮಲ್ಟಿಪ್ಲೆಕ್ಸ್ ಗಳ ಜೊತೆಗೆ ಸೇರಿ, ಹೊಂಬಾಳೆ ಕೂಡ ಅರ್ಜಿಯೊಂದನ್ನ ಹಾಕಿತ್ತು. ಅರ್ಜಿ ವಿಚಾರಣೆಯನ್ನು ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರ ನೀಡಿದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















