ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
![](https://suddione.com/content/uploads/2024/10/gifmaker_me-5-1.gif)
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯವನ್ನು ಕೂಡಲೆ ಬಿಡುಗಡೆಗೊಳಿಸುವಂತೆ ಹೈಕೋರ್ಟ್ ತೀರ್ಪು ನೀಡಿರುವುದನ್ನು ಸ್ವಾಗತಿಸಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಜಿಲ್ಲಾ ಸಮಿತಿಯಿಂದ ಒನಕೆ ಓಬವ್ವ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
2024-25 ನೇ ಸಾಲಿನ ಶೈಕ್ಷಣಿಕ ಧನ ಸಹಾಯಕ್ಕಾಗಿ ಕಾರ್ಮಿಕರ ಮಕ್ಕಳು ಅರ್ಜಿ ಸಲ್ಲಿಸಲು ಮಾ.30 ರವರೆಗೂ ಕಾಲಾವಕಾಶ ನೀಡಬೇಕು. ಸ್ವಂತ ನಿವೇಶನ, ಮನೆಗಳಿಲ್ಲದ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಒದಗಿಸಬೇಕು. ಹಳೆ ಮನೆಯುಳ್ಳ ಕಟ್ಟಡ ಕಾರ್ಮಿಕರು ಹೊಸದಾಗಿ ಮನೆಗಳನ್ನು ನಿರ್ಮಿಸಿಕೊಳ್ಳಲು ನಾಲ್ಕು ಲಕ್ಷ ರೂ.ಗಳ ಸಹಾಯಧನ ಮಂಡಳಿಯಿಂದ ಕೊಡಬೇಕು. ಕಟ್ಟಡ ಕಾರ್ಮಿಕರ ಗುರುತಿನ ಪತ್ರ ನವೀಕರಿಸಲು ನಿಗಧಿಪಡಿಸಿರುವ ಅವಧಿಯನ್ನು ವಿಸ್ತರಿಸಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ರಾಜ್ಯ ಉಪಾಧ್ಯಕ್ಷ ಸಿ.ಕೆ.ಗೌಸ್ಪೀರ್ ಜಿಲ್ಲಾಧಿಕಾರಿ ಕಚೇರಿ ಸಹಾಯಕರ ಮೂಲಕ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಿದರು.
ಬಿ.ಸಿ.ನಾಗರಾಜಚಾರಿ, ಜಿಕ್ರಿಯಾ, ಸಣ್ಣಮ್ಮ, ನಾಗಮ್ಮ, ಅಬ್ದುಲ್ಲಾ, ರಾಘವೇಂದ್ರ, ರಶೀದ್, ರಂಗಸ್ವಾಮಿ, ಶಿವರಾಜ್, ನವೀನ್, ಮಮ್ತಾಜ್, ಪ್ಯಾರಿಜಾನ್, ಮಂಜುನಾಥ್,
ಶೇಖ್ಕಲೀಂವುಲ್ಲಾ, ಗುರುಮೂರ್ತಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
![](https://suddione.com/content/uploads/2025/01/studio-11.webp)