Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಜಾಬ್ ವಿವಾದ : ರಾಮನಗರ ಕಾಲೇಜಿಗೆ ರಜೆ ಘೋಷಣೆ…!

Facebook
Twitter
Telegram
WhatsApp

ರಾಮನಗರ: ಕೊರೊನಾದಿಂದಾಗಿ ಮಕ್ಕಳ ಶಿಕ್ಷಣಕ್ಕೆ ಈಗಾಗಲೇ ತೊಂದರೆಯಾಗಿದೆ. ಸರಿಯಾಗಿ ತರಗತಿಗಳು ನಡೆದಿಲ್ಲ. ಶೈಕ್ಷಣಿಕ ವರ್ಷ ಮುಗಿಯುವ ಸಮಯ ಬೇರೆ ಹತ್ತಿರವಿದೆ. ಈ ಮಧ್ಯೆ ಹಿಜಾಬ್ ವಿವಾದ ರಾಜ್ಯದಲ್ಲಿ ಜೋರಾಗಿಯೇ ಭುಗಿಲೆದ್ದಿದೆ. ಈ ಹಿನ್ನೆಲೆ ರಾಮನಗರದಲ್ಲಿ ಪ್ರಥಮ ದರ್ಜೆ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ನಿನ್ನೆಯಷ್ಟೇ ಕಾಲೇಜುಗಳು ಪುನರಾರಂಭಗೊಂಡಿವೆ. ಈ ಮಧ್ಯೆ ಅಲ್ಲಲ್ಲಿ ಹಿಜಾಬ್ ಬಗ್ಗೆ ಗೊಂದಲ, ಮಾತಿನ ಚಕಮಕಿ ನಡೆಯುತ್ತಲೆ ಇದೆ. ಇದೇ ಕಾರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಲೇಜು ಪುನರಾರಂಭವಾದ ಮೊದಲ ದಿನವೇ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದರು. ಆಡಳಿತ ಮಂಡಳಿ ಎಷ್ಟೇ ಹೇಳಿದ್ರು ಹಿಜಾಬ್ ತೆಗೆಯಲಿಲ್ಲ.

ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಈ ಆದೇಶ ಹೊರಡಿಸಿದ್ದಾರೆ. ಕಾಲೇಜಿಗೆ ರಜೆ ಘೋಷಣೆ ಮಾಡಿದ್ದಾರೆ. ಮುಂದಿನ ಆದೇಶದ ತನಕವೂ ಆನ್ಲೈನ್ ಕ್ಲಾಸ್ ನಡೆಸುವಂತೆ ಕಾಲೇಜು ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!