Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಮಾನತು ಆಗಿದ್ದ ವಿದ್ಯಾರ್ಥಿನಿಯರಲ್ಲೂ ಬದಲಾವಣೆ : ಮಂಗಳೂರಿನಲ್ಲಿ ಹಿಜಾಬ್ ವಿಚಾರ ಸುಖಾಂತ್ಯ.!

Facebook
Twitter
Telegram
WhatsApp

ಮಂಗಳೂರು: ಕಳೆದ ವರ್ಷ ಕುಂದಾಪುರದಲ್ಲಿ ಶುರುವಾಗಿದ್ದ ಹಿಜಾಬ್ ಗಲಾಟೆ ಇಡೀ ದೇಶಾದ್ಯಂತ ಸದ್ದು ಮಾಡಿತ್ತು. ಬಳಿಕ ಪರೀಕ್ಷೆ, ರಿಸಲ್ಟ್ ಅಂತ ತಣ್ಣಗಾಗಿದ್ದ ಹಿಜಾಬ್ ಕಿತ್ತಾಟ, ಇತ್ತೀಚೆಗೆ ಮಂಗಳೂರಿನ ಉಪ್ಪಿನಂಗಡಿ ಪದವಿ ಕಾಲೇಜಿನಲ್ಲಿ ಶುರುವಾಗಿತ್ತು. ಸದ್ಯ ಅಮಾನತಿನ ಬಳಿಕ ವಿದ್ಯಾರ್ಥಿನಿಯರು ಬದಲಾಗಿದ್ದಾರೆ.

ಒಟ್ಟು 46 ವಿದ್ಯಾರ್ಥಿನಿಯರು ಕೂಡ ಹಿಜಾಬ್ ಬಿಟ್ಟು ತರಗತಿಗೆ ಹಾಜರಾಗಿದ್ದಾರೆ. ಅದರ ಜೊತೆಗೆ ಇತ್ತಿಚೆಗೆ ಅಮಾನತಾಗಿದ್ದ ಆರು ವಿದ್ಯಾರ್ಥಿನಿಯರು ಕೂಡ ಹಿಜಾಬ್ ಕಳಚಿ ಕ್ಲಾಸ್ ಗೆ ಹಾಜರಾಗಿದ್ದಾರೆ. 24 ವಿದ್ಯಾರ್ಥಿನಿಯರು ಹಿಜಾಬ್ ವಿಚಾರಕ್ಕೆ ಒಂದು ವಾರ ತರಗತಿಯಿಂದ ಬಹಿಷ್ಕಾರಕ್ಕೊಳಗಾಗಿದ್ರು. ಇದೀಗ ಅವಧಿ ಮುಗಿದ ಬಳಿಕ ಅವರು ಹಾಜರಾಗುವ ಸಾಧ್ಯತೆ ಇದೆ.

ಕಳೆದ ಎರಡು ವಾರದಿಂದ ಉಪ್ಪಿನಂಗಡಿ ಹಿಜಾಬ್ ಕುರಿತ ಕೇಂದ್ರ ಬಿಂದುವಾಗಿತ್ತು. ಹೈಕೋರ್ಟ್ ಸೂಚನೆ ನೀಡಿರುವಂತೆಯೇ ಕಾಲೇಜಿನ ಆಡಳಿತ ಮಂಡಳಿಗಳು ವಿದ್ಯಾರ್ಥಿಗಳಿಗೆ ಸೂಚನೆ ನೀಡಿದ್ದಾರೆ. ಶಾಲಾ ಕಾಲೇಜಿಗೆ ಸಮವಸ್ತ್ರ ಮಾತ್ರ ಧರಿಸಿ ಬರಬೇಕೆಂದು. ಈ ಸಂಬಂಧ ಉಪ್ಪಿನಂಗಡಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವ ಪಟ್ಟು ಹಿಡಿದಿದ್ದರು. ಇದೀಗ ವಿದ್ಯಾರ್ಥಿನಿಯರು ಮನಸ್ಸು ಬದಲಾಯಿಸಿ, ಶಿಕ್ಷಣಕ್ಕೆ ಒತ್ತು ಕೊಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

error: Content is protected !!