Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಕ್ಷಾಂತರ ಭಕ್ತರ ನಡುವೆ ಸಾಗಿದ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ : ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾದ ಅಪಾರ ಜನಸ್ತೋಮ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಅ.02) : ಹಿಂದೂ ಮಹಾಗಣಪತಿಯ 21 ದಿನಗಳ ಭವ್ಯ ಸಂಭ್ರಮಕ್ಕೆ ಶನಿವಾರ ತೆರೆಬಿದ್ದಿತು.

ಕೋವಿಡ್ ಕಾರಣಕ್ಕೆ ಕಳೆದ ವರ್ಷ ಕಳೆಗುಂದಿದ್ದ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ಈ ವರ್ಷ ಆ ಕರಾಳ ಛಾಯೆಯಿಂದ ಹೊರ ಬಂದಿತು.  ಜಿಲ್ಲಾಡಳಿತ ಶೋಭಾಯಾತ್ರೆ, ಡಿಜೆಗೆ ಅವಕಾಶ ನೀಡದಿದ್ದರು ಸಹ ಲಕ್ಷಾಂತರ ಭಕ್ತರು ಸಂಭ್ರಮಕ್ಕೆ ಸಾಕ್ಷಿಯಾದರು.

ಮಧ್ಯಾಹ್ನ 12.30 ರ ಸುಮಾರಿಗೆ ಶುರುವಾದ ವಿಸರ್ಜನಾ ಮೆರವಣಿಗೆ ನಿರೀಕ್ಷೆ ಮೀರಿ ಜನರು ಬಂದ ಕಾರಣ ತಡವಾಯಿತು. ಬಿಸಿಲನ್ನು ಲೆಕ್ಕಿಸದೆ ಜನರು ಮೆರವಣಿಗೆಯಲ್ಲಿ ಸಾಗಿದರು.

ಮದಕರಿನಾಯಕನ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಸಂಗೋಳ್ಳಿ ರಾಯಣ್ಣ ವೃತ್ತ ಹಾಗೂ ಕನಕ ವೃತ್ತದಲ್ಲಿ ಜನತೆ ಕಿಕ್ಕಿರಿದು ಜಮಾಯಿಸಿದ್ದರು. ಪ್ರವಾಸಿ ಮಂದಿರದಿಂದ ಮೆರವಣಿಗೆ ಮುಂದೆ ಬರುತ್ತಿದ್ದಂತೆ ಕಟ್ಟಡಗಳ ಮೇಲಿದ್ದ ಜನರ ಸಂಭ್ರಮ ಮುಗಿಲು ಮುಟ್ಟಿತ್ತು.

ಎತ್ತ ತಿರುಗಿದರು ಸಹ ಜನವೋ..ಜನ ಕಂಡು ಬಂದರು. ಡಿಜೆ ಇಲ್ಲದಿದ್ದರು ಸಹ ಗಣಪತಿ ಮೆರವಣಿಗೆಗೆ ಜನರು ಆಗಮಿಸುತ್ತಾರೆ ಎಂಬುದು ಈ ಬಾರಿ ನಿಜವಾಯಿತು.

ಯುವಕ, ಯುವತಿಯರು, ಮಕ್ಕಳು, ಹಿರಿಯರು ಹೀಗೆ ಎಲ್ಲ ವಯಸ್ಸಿನವರು ಭವ್ಯ ಮೆರವಣಿಗೆಗೆ ಸಾಕ್ಷಿಯಾದರು. ಕೋವಿಡ್ ಕಾರಣಕ್ಕೆ ನೀರು, ಪ್ರಸಾದ ವಿತರಿಸದ ಕಾರಣ ಬಿಸಿಲಿಗೆ ಬಾಯಾರಿದ ಜನತೆ ಹೋಟೆಲ್‍ಗಳನ್ನು ಹುಡುಕುತ್ತಾ ಹೋಗಬೇಕಾಯಿತು. ಮುಖ್ಯ ರಸ್ತೆಯ ಹೋಟೆಲ್‍ಗಳು ಬಾಗಿಲು ಮುಚ್ಚಿದ್ದರಿಂದ ಸಮಸ್ಯೆ ಅನುಭವಿಸಿದರು.

ರಸ್ತೆಯುದ್ದಕ್ಕೂ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು. ಅಹಿತಕರ ಘಟನೆ ನಡೆಯದಂತೆ ಮೆರವಣಿಗೆಯಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದರು. ಜತೆಗೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ನೇತೃತ್ವದ ತಂಡ ಸಹ ಎಲ್ಲಿಯೂ ಸಮಸ್ಯೆ ಆಗದಂತೆ ಎಚ್ಚರವಹಿಸಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

error: Content is protected !!