Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆಗೆ ಲಕ್ಷಾಂತರ ಜನರು ಭಾಗಿಯಾಗುವ ನಿರೀಕ್ಷೆ :  ಎಸ್.ಆರ್.ಪ್ರಭಂಜನ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.07  : ವಿಶ್ವಹಿಂದೂ ಪರಿಷತ್ ಬಜರಂಗದಳದ ವತಿಯಿಂದ ನಗರದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆಗೆ ಐತಿಹಾಸಿಕ ಚಿತ್ರದುರ್ಗವನ್ನು ಕೇಸರಿಕರಣಗೊಳಿಸಲಾಗಿದೆ ಎಂದು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಎಸ್.ಆರ್.ಪ್ರಭಂಜನ್ ತಿಳಿಸಿದರು.

ಹಿಂದೂ ಮಹಾಗಣಪತಿ ಪೆಂಡಾಲ್‍ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಾನುವಾರದ ಶೋಭಾಯಾತ್ರೆಗೆ ಸಿದ್ದತೆಗಳನ್ನು ಕೈಗೊಂಡಿದ್ದು, ಲಕ್ಷಾಂತರ ಜನ ಭಾಗಿಯಾಗುವ ನಿರೀಕ್ಷೆಯಿದೆ. ಬೆಳಿಗ್ಗೆ 10 ಗಂಟೆಗೆ ಮಹಾರಾಷ್ಟ್ರ ಕೊಲ್ಲಾಪುರದ ಕನ್ನೇರಿಮಠ್ ಕಾಡಸಿದ್ದೇಶ್ವರ ಮಹಾಸ್ವಾಮಿಗಳು ಮೆರವಣಿಗೆ ಉದ್ಘಾಟಿಸಲಿದ್ದು, ಹನ್ನೆರಡಕ್ಕೂ ಹೆಚ್ಚು ಸ್ವಾಮೀಜಿಗಳು ಶೋಭಾಯಾತ್ರೆ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಿದರು.

ವಿಶೇಷ ಕಲಾ ತಂಡಗಳು ಶೋಭಾಯಾತ್ರೆಯಲ್ಲಿ ಭಾಗವಹಿಸಲಿದ್ದು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಾಕಷ್ಟು ಕಾರ್ಯಕರ್ತರು, ಜನಸಾಮಾನ್ಯರು ಕೆಲಸ ಮಾಡಿದ್ದಾರೆ. ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗಬಾರದೆಂದು ಅಲ್ಲಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ ಎಂದರು.

ಹಿಂದೂ ಮಹಾಗಣಪತಿ ಮಹೋತ್ಸವ ಸಮಿತಿ ಅಧ್ಯಕ್ಷ ಜಿ.ಎಂ.ಸುರೇಶ್ ಮಾತನಾಡಿ ಬೃಹತ್ ಶೋಭಾಯಾತ್ರೆಗೆ ಚಿತ್ರದುರ್ಗದಲ್ಲಿ ಅಲಂಕಾರ ಮಾಡಿರುವುದನ್ನು ನೋಡಿ ಗ್ರಾಮೀಣ ಪ್ರದೇಶಗಳಿಂದ ತಂಡೋಪ ತಂಡವಾಗಿ ಜನ ಆಗಮಿಸಿ ಹಿಂದೂ ಮಹಾಗಣಪತಿಯ ದರ್ಶನ ಪಡೆಯುತ್ತಿದ್ದಾರೆ. ಈ ಬಾರಿ ಹೆಚ್ಚಿನ ಜನ ಶೋಭಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಅಲಂಕಾರ ಆಕರ್ಷಣೀಯವಾಗಿರುವುದರಿಂದ ಸಾಗರೋಪಾದಿಯಲ್ಲಿ ಜನ ಬರುತ್ತಾರೆ. ಹದಿನೇಳು ವರ್ಷಗಳಿಂದ ಹಿಂದೂ ಮಹಾಗಣಪತಿಗೆ ಬರದವರು ಈ ಸಾರಿ ಬಂದಿದ್ದಾರೆ. ವರ್ಷ ವರ್ಷಕ್ಕೂ ಹಿಂದೂ ಮಹಾಗಣಪತಿ ಒಂದು ಶಕ್ತಿಯಾಗಿ ಬೆಳೆಯುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಹಿಂದೂ ಮಹಾಗಣಪತಿ ಉತ್ಸವ ಸಮಿತಿಯ ಮುಖಂಡ ಟಿ.ಬದ್ರಿನಾಥ್, ಷಡಾಕ್ಷರಪ್ಪ, ಸಂದೀಪ್, ಪಿ.ರುದ್ರೇಶ್, ರಂಗಸ್ವಾಮಿ, ಕಿರಣ್‍ಕುಮಾರ್ ಪತ್ರಿಕಾಗೋಷ್ಠಿಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...