Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದು ಹಿಂದೂ ಮಹಾಗಣಪತಿ ಪುರಪ್ರವೇಶ : ಸಖತ್ ವೈರಲ್ ಆಯ್ತು ಪೋಸ್ಟರ್…!

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.17 :  ರಾಜ್ಯದಲ್ಲಿಯೇ ಪ್ರಸಿದ್ದಿ ಪಡೆದಿರುವ ಕೋಟೆ ನಾಡಿನ ಹಿಂದೂ ಮಹಾಗಣಪತಿ ಪ್ರತಿವರ್ಷದಂತೆ ಈ ವರ್ಷವೂ ವಿಶ್ವಹಿಂದೂಪರಿಷತ್ ಮತ್ತು ಬಜರಂಗದಳ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಇಂದು ಮಧ್ಯಾನ್ಹ 3:30 ಗಂಟೆಗೆ ಹಿಂದೂ ಮಹಾಗಣಪತಿಯ ಪುರಪ್ರವೇಶಕ್ಕೆ ಕೋಟೆನಾಡು ಸಜ್ಜಾಗಿದೆ. ಈಗಾಗಲೇ ಮಹಾರಾಷ್ಟ್ರದ ಪುಣೆಯಲ್ಲಿ ಸುಮಾರು 13 ಅಡಿ ಎತ್ತರದ ಗಣೇಶಮೂರ್ತಿ ತಯಾರಾಗಿದ್ದು, ರಾಷ್ಟ್ರೀಯ ಹೆದ್ದಾರಿ ಮೂಲಕ ನಗರದ ಹೊರವಲಯದ ಮಾದಾರ ಚನ್ನಯ್ಯ ಗುರುಪೀಠಕ್ಕೆ ಬಂದು ತಲುಪಲಿದೆ. ಅಲ್ಲಿ ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ಜಿಲ್ಲೆಯ ಪ್ರಮುಖ ಮಠಾಧೀಶರು ಅದ್ದೂರಿಯಾಗಿ ಮೂರ್ತಿಯನ್ನು ಸ್ವಾಗತಿಸಲಾಗುತ್ತದೆ.  ಧಾರ್ಮಿಕ ಪೂಜಾವಿಧಿಗಳನ್ನು ನೆರವೇರಿಸಿದ ಬಳಿಕ ಮೆರವಣಿಗೆ ಮೂಲಕ ಬಿ.ಡಿ. ರಸ್ತೆಯ ಜೈನಧಾಮಕ್ಕೆ ಪುರ ಪ್ರವೇಶಿಸಲಿದೆ.

ಬೆಳಿಗ್ಗೆಯಿಂದಲೇ ಮಾದಾರ ಚನ್ನಯ್ಯ ಸ್ವಾಮೀಜಿ ಗುರುಪೀಠಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ವಿಶ್ವಹಿಂದೂಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಭಕ್ತರು,  ಸಾರ್ವಜನಿಕರು ಆಗಮಿಸುವರು. ಬೃಹತ್ ಗಾತ್ರದ ಗಣಪತಿ ಮೂರ್ತಿಯನ್ನು ಕಣ್ತುಂಬಿಕೊಳ್ಳಲು ಪ್ರತಿಯೊಬ್ಬರೂ ಕುತೂಹಲದಿಂದ ಕಾಯುತ್ತಿದ್ದಾರೆ.

ಸಖತ್ ವೈರಲ್ ಆದ ಪುರಪ್ರವೇಶದ ಪೋಸ್ಟರ್ :

ಚಿತ್ರದುರ್ಗದ ಹಿಂದೂ ಮಹಾ ಗಣಪತಿ ಪುರ ಪ್ರವೇಶದ ಈ ಪೋಸ್ಟರ್ ಶನಿವಾರ ಸಂಜೆಯಿಂದಲೇ ಎಲ್ಲರ ಮೊಬೈಲ್ ಗಳಲ್ಲಿ, ವಾಟ್ಸಾಪ್, ಫೇಸ್‍ಬುಕ್, ಇನ್ಸ್ಟಾಗ್ರಾಮ್ ಗಳ ಡಿಪಿ, ಸ್ಟೇಟಸ್, ಪ್ರೊಫೈಲ್ ಹೀಗೆ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ವೈರಲ್ ಆಗಿದ್ದುದು ಕಂಡು ಬಂತು. ಪ್ರತಿಷ್ಠಾಪನೆ ಆದ ದಿನದಿಂದ ಶೋಭಾಯಾತ್ರೆಯ ದಿನದ ವರೆಗೂ ಜಿಲ್ಲೆಯ ಜನರಷ್ಟೇ ಅಲ್ಲದೇ ಹೊರ ಜಿಲ್ಲೆಯ ಬಹುತೇಕರು ಹಿಂದೂ ಮಹಾ ಗಣಪತಿಯ ಫೋಟೋ ವಿಡಿಯೋವನ್ನು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮದಿಂದ ಭಕ್ತಿಯಿಂದ ಆರಾಧಿಸುತ್ತಾರೆ.

ಹಿಂದೂ ಮಹಾ ಗಣಪತಿಯನ್ನು ಸೆಪ್ಟೆಂಬರ್ 18 ರಂದು ಪ್ರತಿಷ್ಠಾಪಿಸಿ, ಅಕ್ಟೋಬರ್ 8 ರಂದು ಶೋಭಾಯಾತ್ರೆ ಮೂಲಕ ಗಣೇಶನ ವಿಸರ್ಜನೆ ಮಾಡಲಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

error: Content is protected !!