Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅದ್ದೂರಿಯಾಗಿ ನೆರವೇರಿದ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಬೈಕ್‍ರ್ಯಾಲಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ. ಅಕ್ಟೋಬರ್.05 :
ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ನೇತೃತ್ವದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ 2023 ರ ಬೃಹತ್ ಶೋಭಾ ಯಾತ್ರೆ ಇದೇ ಅಕ್ಟೋಬರ್ 08 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಗುರುವಾರ ನಗರದಲ್ಲಿ ಬೃಹತ್ ಬೈಕ್ ರ‌್ಯಾಲಿ ನಡೆಸಲಾಯಿತು.

 

ರ‌್ಯಾಲಿ ಉದ್ಘಾಟನೆಯನ್ನು ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿಗಳು ಚಾಲನೆ ನೀಡಿದರು. ಹಿಂದೂ ಮಹಾಗಣಪತಿಯ ಸಮಿತಿಯ ಅಧ್ಯಕ್ಷರಾದ ಜಿ.ಎಂ. ಸುರೇಶ್, ಸಮಿತಿಯ ಮಾರ್ಗದರ್ಶಕರಾದ ಬದ್ರಿನಾಥ್,  ಸೇರಿದಂತೆ ಪ್ರಮುಖರ ನೇತೃತ್ವದಲ್ಲಿ ಅದ್ದೂರಿಯಾಗಿ ನೆರವೇರಿತು.

ಈ ವೇಳೆ ಬಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಪ್ರಬಂಜನ್ ಮಾತನಾಡಿ, ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಸಮಸ್ತ ಹಿಂದೂ ಬಾಂಧವರು ಭಾಗವಹಿಸಿ ಒಗ್ಗಟ್ಟು ಪ್ರದರ್ಶಿಸಬೇಕಿದೆ. ಹಿಂದೂಗಳನ್ನು ಜಾಗೃತಿಗೊಳಿಸುವುದು ನಮ್ಮ ಉದ್ದೇಶವಾಗಿದ್ದು, ಸಮಸ್ತರು ಇದನ್ನೆ ಆಹ್ವಾನವೆಂದು ತಿಳಿದು ಶೋಭಾಯಾತ್ರೆಯಲ್ಲಿ ಭಾಗವಹಿಸುವಂತೆ ವಿನಂತಿಸಿದರು.

 

 

ಈ ಬೈಕ್ ರ‌್ಯಾಲಿಯು ಹೊಳಲ್ಕೆರೆ ರಸ್ತೆಯ
ಕನಕ ಸರ್ಕಲ್‍ನಿಂದ ಹೊರಟ ಬೈಕ್‍ರ್ಯಾಲಿ ಸಂಗೊಳ್ಳಿರಾಯಣ್ಣ ವೃತ್ತ, ಬುರುಜನಹಟ್ಟಿ ಸರ್ಕಲ್, ಆನೆಬಾಗಿಲು, ಉಚ್ಚಂಗಿಯಲ್ಲಮ್ಮ ದೇವಸ್ಥಾನ, ರಂಗಯ್ಯನಬಾಗಿಲು, ಜೋಗಿಮಟ್ಟಿ ರೋಡ್, ಬುದ್ದ ಸರ್ಕಲ್, ಚೈತನ್ಯ ಸರ್ಕಲ್, ಬಿ.ಡಿ.ರೋಡ್, ಗಾಂಧಿ ಸರ್ಕಲ್, ಮೆದೇಹಳ್ಳಿ ರೋಡ್, ಎನ್.ಹೆಚ್-ಬೈಪಾಸ್, ಜೆ.ಸಿ.ಆರ್. ವಾಸವಿ ಸರ್ಕಲ್, ಅಂಬೇಡ್ಕರ್ ವೃತ್ತದ ಮುಂಭಾಗದಿಂದ ಹಳೆ ಮಾಧ್ಯಮಿಕ ಶಾಲೆ ಆವರಣದಲ್ಲಿ ಮುಕ್ತಾಯಗೊಂಡಿತು. ಈ ರ‌್ಯಾಲಿ ಆರಂಭದಿಂದ ಮುಗಿಯುವ ತನಕ ಮಾರ್ಗದುದ್ದಕ್ಕೂ ಜೈ ಶ್ರೀ ರಾಮ್, ಭಾರತ್ ಮಾತಾ ಕೀ ಜೈ  ಘೋಷಣೆಗಳು ಗಮನಸೆಳೆದವು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ಪಿ. ರುದ್ರೇಶ್, ಜಿಲ್ಲಾ ಸಹ ಕಾರ್ಯದರ್ಶಿ ಕೇಶವ್, ಬಜರಂಗದಳ ಜಿಲ್ಲಾ ಸಂಯೋಜಕರು ಸಂದೀಪ್, ಜಿಲ್ಲಾ ಮುಖಂಡರಾದ ಅಶೋಕ್,ರಾಜೇಶ್, ನಗರ ಸಹ ಕಾರ್ಯದರ್ಶಿ ರಂಗಸ್ವಾಮಿ, ಬಜರಂಗದಳ ನಗರ ಸಂಯೋಜಕರು ರಂಗಸ್ವಾಮಿ, ಗ್ರಾಮಾಂತರ ಅಧ್ಯಕ್ಷರಾದ ಶಶಿಧರ್ ಸಮಿತಿಯ ಸದಸ್ಯರಾದ ವಿಪುಲ್ ಜೈನ್, ಕಾರ್ತಿಕ್,  ಅಜಿತ್, ಸೇರಿದಂತೆ ಸಾವಿರಾರು ಮಂದಿ ಈ ಬೈಕ್ ರ‌್ಯಾಲಿಯಲ್ಲಿ  ಭಾಗಿಯಾಗಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

error: Content is protected !!