Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಂದೂ-ಮುಸ್ಲೀಂ ಒಂದೇ ತಾಯಿ ಮಕ್ಕಳಂತೆ ಬಾಳಬೇಕು : ಯಡಿಯೂರಪ್ಪ

Facebook
Twitter
Telegram
WhatsApp

 

ಬೆಂಗಳೂರು: ಮುಸ್ಲಿಂ ಸಮುದಾಯವನ್ನು ಗುರಿ ಮಾಡಿಕೊಂಡು ಸಮಾಜದಲ್ಲಿ ನಡೆಯುತ್ತಿರುವ ಕೆಲವೊಂದು ಘಟನೆಗೆ ಮಾಜಿ ಸಿಎಂ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಾನು ಒಂದೇ ಮಾತಲ್ಲಿ ಹೇಳಬೇಕು ಅಂದ್ರೆ ಹಿಂದೂ ಮುಸ್ಲಿಂ ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಅನ್ನೋದು ಎಲ್ಲರ ಅಪೇಕ್ಷೆ. ಯಾರೋ ಕಿಡಿಗೇಡಿಗಳು ಇದನ್ನು ಅಡ್ಡಿ ಮಾಡುವಂತ ಪ್ರಯತ್ನ ಮಾಡಿದ್ರೆ, ಈಗಾಗಲೇ ಮುಖ್ಯಮಂತ್ರಿಗಳು ಹೇಳಿದ್ದಾರೆ ಅಂಥವರ ಮೇಲೆ ಕಾನೂನಿನ ಕ್ರಮ ತೆಗೆದಕೊಳ್ಳುತ್ತೇನೆ. ಇನ್ನು ಮುಂದೆಯಾದರು ಅಹಿತಕರ ಘಟನೆ ನಡೆಯದಂತೆ ಒಟ್ಟಾಗಿ ಬಾಳುವುದಕ್ಕೆ ಅವಕಾಶ ಮಾಡಿಕೊಡಬೇಕು.

ಇಂಥ ಘಟನೆಗಳನ್ನು ಯಾವುದೇ ಕಾರಣಕ್ಕೂ ಸರ್ಕಾರ ಸಹಿಸುವುದಿಲ್ಲ. ಈಗಾಗಲೇ ಸಿಎಂ ಅವರು ಎಚ್ಚರಿಕೆ ಕೊಟ್ಟಿದ್ದಾರೆ. ನಾನು ಸಹ ಕಿವಿ ಮಾತನ್ನು ಹೇಳೋದಕ್ಕೆ ಇಷ್ಟಪಡ್ತೀನಿ. ಇಲ್ಲಿಗೆ ಎಲ್ಲವನ್ನು ನಿಲ್ಲಿಸಿ ನಿಮ್ ನಿಮ್ಮ ಕೆಲಸ ಮಾಡಿ. ಅವರು ಸಹ ಗೌರವ, ನೆಮ್ಮದಿಯಿಂದ ಬದುಕಬೇಕಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

ಇನ್ನು ರಾಜ್ಯಪ್ರವಾಸದ ಬಗ್ಗೆ ಮಾತನಾಡಿ, ಮೂರು ತಂಡಗಳಾಗಿ 12 ರಿಂದ 24ನೇ ತಾರೀಖಿನವರೆಗೆ ರಾಜ್ಯ ಪ್ರವಾಸವನ್ನು ಮಾಡುತ್ತಿದ್ದೇವೆ. ಮೊದಲ ತಂಡ ನಳೀನ್ ಕುಮಾರ್ ಕಟೀಲ್, ಎರಡನೇ ತಂಡದಲ್ಲಿ ನಾನು ಜೊತೆಗಿರುತ್ತೇನೆ, ಮೂರನೇ ತಂಡದಲ್ಲಿ ಬಸವರಾಜ್ ಬೊಮ್ಮಾಯಿ ಇರ್ತಾರೆ. ಪಕ್ಷವನ್ನು ಬಲಪಡಿಸೋ ದೃಷ್ಟಿಯಿಂದ ವಿಶೇಷವಾಗಿ ಕಾರ್ಯಕರ್ತರ ಜೊತೆಗೆ ಸಮಾಲೋಚನೆ ಮಾಡಿ, ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವ ದೃಷ್ಟಿಯಿಂದ ಈ ಪ್ರವಾಸ ಮಾಡುತ್ತಿದ್ದೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!