ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಜೂ. 02 : ನಗರದ 14 ನೇ ವಾರ್ಡಿನಲ್ಲಿ ಅನಧಿಕೃತವಾಗಿ ನಾಮಫಲಕ ಹಾಕುತ್ತಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಹಾಗೂ ಸ್ಥಳೀಯರಿಂದ ನಗರಸಭೆಯ ಪೌರಾಯುಕ್ತರಿಗೆ ಮನವಿ ಸಲ್ಲಿಸುವ ಮುಖಾಂತರ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಲಾಯಿತು.
ಅನಾದಿಕಾಲದಿಂದ ಇರುವ ಹೊಳಲ್ಕೆರೆ ರಸ್ತೆಯ ಮಾರಮ್ಮನ ದೇವಸ್ಥಾನದ ಪ್ರದೇಶಕ್ಕೆ – ಮಕ್ಕ ಮಸೀದಿ ರಸ್ತೆ ಎಂದು ಹೆಸರು ಬದಲಾವಣೆಯನ್ನು ಮಾಡುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಹಾಗೂ ಸ್ಥಳೀಯರಿಂದ ವಿರೋಧ ವ್ಯಕ್ತಪಡಿಸಿ ನಗರಸಭೆಯ ಪೌರಾಯುಕ್ತರಿಗೆ ಮನವಿ ಸಲ್ಲಿಸುವ ಮುಖಾಂತರ ಕಾನೂನು ಕ್ರಮ ಜರುಗಿಸಬೇಕೆಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ. ಪಿ.ರುದ್ರೇಶ್ ವಿಶ್ವ ಹಿಂದೂ ಪರಿಷದ್ ಬಜರಂಗದಳ ಮುಖಂಡರು, ಹಾಗೂ ಪ್ರಮುಖರಾದ ಶ್ರೀನಿವಾಸ್ ಮಂಜುನಾಥ್ , ಚಲವಾದಿ ತಿಪ್ಪೇಸ್ವಾಮಿ ಮತ್ತು 14ನೇ ವಾರ್ಡಿನ ಸ್ಥಳೀಯ ಪ್ರಮುಖರಾದ ಪುನೀತ್, ಆಡಿಟರ್ ಗಂಗಣ್ಣ , ರಾಜ ರಾಜಣ್ಣ , ನವೀನ್ , ಮಂಜು, ಇತರರು ಇದ್ದರು.






