Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

18.68 ಕೋಟಿ ಜನಸಂಖ್ಯೆಯಲ್ಲಿ ಪಾಕಿಸ್ತಾನದಲ್ಲಿರುವ ಹಿಂದೂಗಳೆಷ್ಟು ಗೊತ್ತಾ….?

Facebook
Twitter
Telegram
WhatsApp

ಪೇಶಾವರ: ಪಾಕಿಸ್ತಾನದಲ್ಲಿ ಸದ್ಯ 18.68 ಕೋಟಿ ಜನಸಂಖ್ಯೆ ಇದೆ. ಇದರಲ್ಲಿ 22.10 ಲಕ್ಷಕ್ಕೂ ಅಧಿಕ ಮಂದಿ ಅಲ್ಪಸಂಖ್ಯಾತ ಹಿಂದೂಗಳಿದ್ದಾರೆ ಎಂದು ವರದಿಯೊಂದು ಹೊರಬಿದ್ದಿದೆ. ಪಾಕಿಸ್ತಾನದ ಶಾಂತಿ ಮತ್ತು ನ್ಯಾಯ ಕೇಂದ್ರದ ವರದಿ ಈ ವಿಚಾರ ತಿಳಿಸಿದೆ.

ರಾಷ್ಟ್ರೀಯ ಅಂಕಿ ಅಂಶ ಮತ್ತು ನೋಂದಣಿ ಪ್ರಾಧಿಕಾರದ ಮಾಹಿತಿ ಆಧರಿಸಿ ಈ ವರದಿ ತಯಾರಿಸಲಾಗಿದೆ. ದೇಶದ ಒಟ್ಟು ಜನಸಂಖ್ಯೆ ಪೈಕಿ ಶೇಕಡ 5ಕ್ಕಿಂತ ಕಡಿಮೆ ಸಂಖ್ಯೆಯ ಅಲ್ಪಸಂಖ್ಯಾತರು ವಾಸವಾಗಿದ್ದು, ಅವುಗಳಲ್ಲಿ ಶೇಕಡ 1.18ರಷ್ಟಿರುವ ಹಿಂದೂಗಳದ್ದು ದೊಡ್ಡ ಅಲ್ಪಸಂಖ್ಯಾತ ಸಮುದಾಯವಾಗಿದೆ. ಈ ವರ್ಷದ ಮಾರ್ಚ್‌ವರೆಗೆ ದೇಶದಲ್ಲಿ ಒಟ್ಟು ಜನಸಂಖ್ಯೆ 18,68,90,601 ರಷ್ಟಿದೆ ಎಂದು ನೋಂದಾವಣೆಯಾಗಿದ್ದು, ಇದರಲ್ಲಿ 18,25,92,000 ಮಂದಿ ಮುಸ್ಲಿಮರಾಗಿದ್ದಾರೆ. ಎನ್‌ಎಡಿಆರ್‌ಎಯಿಂದ ಗಣಕೀಕೃತ ರಾಷ್ಟ್ರೀಯ ಗುರುತಿನ ಚೀಟಿಗೆ (ಸಿಎನ್‌ಐಚಿ) ಸಂಗ್ರಹಿಸಿರುವ ಡೇಟಾ ಆಧಾರದ ಮೇಲೆ ಈ ಲೆಕ್ಕಾಚಾರ ಮಾಡಲಾಗಿದೆ.

ನೋಂದಾವಣೆ ಮಾಡಿಕೊಂಡಿರುವ ಹಿಂದೂಗಳ ಸಂಖ್ಯೆ 22,10,566 ಆಗಿದ್ದು, ಕ್ರಿಶ್ಚಿಯನ್ನರು 18,73,348, ಅಹಮದೀಯರು 1,88,340,ಸಿಖ್ಖರು 74,130 ಮತ್ತು 3,917 ಮಂದಿ ಪಾರ್ಸಿಗಳಿದ್ದಾರೆ ಎಂದು ಪಾಕಿಸ್ತಾನ 3 ರಾಷ್ಟ್ರೀಯ ಜನಗಣತಿಯಲ್ಲಿ ತಿಳಿದುಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!