Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರು | ಅದ್ದೂರಿಯಾಗಿ ನೇರವೇರಿದ ವಿಷ ಜಂತುಗಳ ಪರಿಹಾರಕ ರಂಗನಾಥ ಸ್ವಾಮಿಯ ಅಂಬಿನೋತ್ಸವ

Facebook
Twitter
Telegram
WhatsApp

 

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 13 : ತಾಲೂಕಿನ ವಾಣಿ ವಿಲಾಸ ಸಾಗರ ಜಲಾಶಯದ ಹಿನ್ನೀರಿನ ದಡದಲ್ಲಿರುವ ಬುಡಕಟ್ಟು ಕಾಡುಗೊಲ್ಲರ ಆರಾಧ್ಯ ದೈವ ಹಾರನಕಣಿವೆ ಶ್ರೀ ರಂಗನಾಥಸ್ವಾಮಿಯ ಅಂಬಿನೋತ್ಸವ ಹಾಗೂ ಹಾವು, ಚೇಳುಗಳ ಅರ್ಪಿಸುವ ಹರಕೆಯ ಜಾತ್ರೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಾನುವಾರ 1 ಗಂಟೆ ಸಮಯದಲ್ಲಿ ಸಂಭ್ರಮ ಸಡಗರದಿಂದ ನೇರವೇರಿತು.

ಹಿರಿಯೂರು ಹಾಗೂ ಹೊಸದುರ್ಗ ತಾಲೂಕಿನ ಗಡಿಭಾಗದಲ್ಲಿ ಹರಿಹರರು ನೆಲೆಸಿದ್ದ ಪ್ರಮುಖ ಕ್ಷೇತ್ರವೆಂದು ಕರೆಯುವ ಹಾರನಕಣಿವೆ ಕ್ಷೇತ್ರದ ಅಪಾರ ಮಹಿಮೆ ಹಾಗೂ ಭಕ್ತರನ್ನು ಹೊಂದಿರುವ ಪುಣ್ಯ ಕ್ಷೇತ್ರವಾಗಿದ್ದು, ಶ್ರೀ ರಂಗನಾಥಸ್ವಾಮಿಯ ದಸರಾ ಪ್ರಯುಕ್ತ ವಿಶೇಷ ಜಾತ್ರೆ, ಅಂಬಿನೋತ್ಸವ ಹಾಗೂ ವಿಶೇಷ ಪೂಜೆಗಳು ನಡೆದವು.

ಹೊಸದುರ್ಗ ತಾಲೂಕಿನ ಅಂಚಿಬಾರಿಹಟ್ಟಿ ಗ್ರಾಮದಲ್ಲಿರುವ ಶ್ರೀ ರಂಗನಾಥಸ್ವಾಮಿಯ ಉತ್ಸವ ಮೂರ್ತಿಗೆ ವಿಶೇಷಪೂಜೆ ಸಲ್ಲಿಸಿದ ಬಳಿಕ ವಾಣಿವಿಲಾಸ ಸಾಗರ ಜಲಾಶಯದಲ್ಲಿ ಸ್ವಾಮಿಗೆ ಗಂಗಾಪೂಜೆ ಹಾಗೂ ಕುದುರೆ ಪೂಜೆ ಕಾರ್ಯ ನೆರವೇರಿಸಲಾಯಿತು. ಬಳಿಕ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಮೆರವಣಿಗೆಯೊಂದಿಗೆ ಗುಡಿ ಗೌಡ, ಪೂಜಾರಿ, ಗ್ರಾಮದ ಅಣ್ಣ-ತಮ್ಮಂದಿರು ಹಾಗೂ ಭಕ್ತರ ನೇತೃತ್ವದಲ್ಲಿ ಅದ್ದೂರಿಯಾಗಿ ಹಾರನಕಣಿವೆ ಕ್ಷೇತ್ರಕ್ಕೆ ಕರೆತಂದು ಶಿವ ಹಾಗೂ ವಿಷ್ಣುವಿಗೆ ಮೊದಲ ಪೂಜೆ ಸಲ್ಲಿಸಿದರು. ನಂತರ ಜಂಬೂ ಮರದ ಮುಂದೆ ನೆಟ್ಟಿದ್ದ ಬಾಳೆ ಗಿಡಕ್ಕೆ ಪೂಜಾರಿಯು ಮೂರು ಬಾರಿ ಪ್ರದಕ್ಷಿಣೆ ಹಾಕಿ, ಬಿಲ್ಲು ಹಿಡಿದು ಬಾಣ ಹೊಡೆದು, ಬಾಳೆಗಿಡ ಕಡಿಯುವ ಮೂಲಕ ಅಂಬಿನೋತ್ಸವ ಕಾರ್ಯ ನೇರವೇರಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!