Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ಬಸವರಾಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ

---Advertisement---

ಸುದ್ದಿಒನ್, ಹಿರಿಯೂರು, ಮೇ. 13  : ನಗರದ ಹೊರವಲಯದಲ್ಲಿರುವ ಶ್ರೀ ಬಸವರಾಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇಕಡಾ ನೂರರಷ್ಟು ಫಲಿತಾಂಶ ಲಭಿಸಿದೆ.

ಮೇ 13ರಂದು ಪ್ರಕಟಗೊಂಡಿರುವ ಸಿಬಿಎಸ್.ಸಿಯ ಹತ್ತನೇ ತರಗತಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆರ್. ಕೃತಿಕಾ 91.2% ಶಾಲೆಗೆ ಮೊದಲ ಸ್ಥಾನ ಪಡೆದಿದ್ದಾರೆ. ಉಳಿದಂತೆ ಎಂ. ಯಶಸ್ ಗೌಡ 90%, ವಿ. ಪ್ರೀತಿ 88%, ಶೇಕ್ ಮೊಹಮ್ಮದ್ 88%, ಪಿಎಸ್. ಮೇಘನಾ 85%, ಫಲಿತಾಂಶದ ಮೂಲಕ ಶಾಲೆಗೆ ಉತ್ತಮ ಹೆಸರುಗಳಿಸಿದ್ದಾರೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಬಸವರಾಜ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಬಿಎಸ್. ಸಚಿನ್ ಗೌಡ, ಶಾಲೆಯ ಪ್ರಾಂಶುಪಾಲರಾದ ಡಿ. ರಮಿತ ಸೇರಿದಂತೆ ಶಾಲೆಯ ಸಿಬ್ಬಂದಿಗಳು ಮತ್ತು ಪೋಷಕರು ಅಭಿನಂದಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment