Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ಹಾವು ಕಚ್ಚಿ ಬಾಲಕ ಸಾವು, ಪೋಷಕರ ಆಕ್ರೋಶ

---Advertisement---

ಸುದ್ದಿಒನ್, ಹಿರಿಯೂರು, ಜನವರಿ.24 : ತಾಲೂಕಿನ ಧರ್ಮಪುರ ಹೋಬಳಿ ವ್ಯಾಪ್ತಿಯಲ್ಲಿನ ಬೆನಕನಹಳ್ಳಿ ಗ್ರಾಮದಲ್ಲಿ ಹಾವು ಕಚ್ಚಿದ ಪರಿಣಾಮ 5ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಮೃತಪಟ್ಟಿರುವ ದುರಂತ ಘಟನೆ ಬುಧವಾರ ನಡೆದಿದೆ.

ಬೆನಕನಹಳ್ಳಿ ಗ್ರಾಮದ ಶಶಾಂಕ್(11) ಮೃತ ವಿದ್ಯಾರ್ಥಿ. ಈತ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿದ್ದನು. ಈತನು ಮಂಗಳವಾರ ರಾತ್ರಿ ತನ್ನ ತಂದೆಯ ಜತೆಗೆ ಜಮೀನಿಗೆ ನೀರು ಹಾಯಿಸಲು ಹೋಗಿದ್ದಾನೆ. ನೀರು ಬಿಟ್ಟು ಜಮೀನಿನ ಬದುವಿನಲ್ಲಿ ಮಲಗಿದ್ದಾಗ ನಾಗರಹಾವು ಕಚ್ಚಿದ್ದು, ತಕ್ಷಣವೇ ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರ ಆಸ್ಪತ್ರೆಗೆ ಕರೆದು ಕೊಂಡು ಹೋಗಿದ್ದು, ಅಲ್ಲಿಂದ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಧರ್ಮಪುರ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ ಕಾರಣ ಬಾಲಕ ಮೃತಪಟ್ಟಿದ್ದಾನೆಂದು ಆರೋಪಿಸಿ ಮೃತನ ಸಂಬಂಧಿಕರು ಧರ್ಮಪುರದ ಪ್ರಾಥಮಿಕ ಆರೋಗ್ಯ ಕೇಂದ್ರ  ಮುಂಭಾಗದಲ್ಲಿ ಬಾಲಕನ ಮೃತದೇಹ ಇಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನಾ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಅಬ್ಬಿನಹೊಳೆ ಪೊಲೀಸರು ಭೇಟಿ ನೀಡಿ,  ಪ್ರತಿಭಟನಾಕಾರರನ್ನು ಮನವೊಲಿಸಿ ಪ್ರತಿಭಟನೆ ಕೊನೆಗೊಳಿಸಿದ್ದಾರೆ.
ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...